Breaking – ಸಿಎಂ ವಿರುದ್ಧ ತನಿಖೆಗೆ ರಾಜ್ಯಪಾಲರ ಅನುಮತಿ
ಬೆಂಗಳೂರು : ಮುಡಾ ಹಗರಣ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅವಕಾಶ ನೀಡುವಂತೆ ರಾಜ್ಯಪಾಲರಿಗೆ ಮನವಿ ನೀಡಿದ್ದ ಹಿನ್ನಲೆಯಲ್ಲಿ ಇಂದು ರಾಜ್ಯಪಾಲರು ತನಿಖೆಗೆ ಆದೇಶ ಹೊರಡಿಸಿದ್ದಾರೆ.
ಕೆಲ ದಿನಗಳ ಹಿಂದೆ ಸಿಎಂ ಸರ್ಕಾರಕ್ಕೆ ಮುಡಾ ಪ್ರಕರಣದ ಕುರಿತು ಉತ್ತರಿಸುವಂತೆ ನೋಟೀಸ್ ನೀಡಿದ್ದರು. ಇದಾದ ನಂತರ ಸಿಎಂ ವಿರುದ್ಧ ತನಿಖೆಗೆ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ ಅವರು ಮುಡಾ ಹಗರಣದ ಕುರಿತು ತನಿಖೆಗೆ ಅವಕಾಶ ನೀಡುವಂತೆ ರಾಜ್ಯಪಾಲರಿಗೆ ದಾಖಲೆ ಜೊತೆ ಮನವಿ ಮಾಡಿದ್ದರು. ಸಧ್ಯ ಸಿಎಂ ವಿರುದ್ಧದ ತನಿಖೆಗೆ ಆದೇಶ ಹೊರಡಿಸಿದ್ದು, ಕಾನೂನು ರೀತಿಯ ಹೋರಾಟಕ್ಕೆ ಸರ್ಕಾರ ನಿರ್ಧಾರ ಮಾಡಿದೆ.


