Select Page

Advertisement

ಕುರಿ ಹೊಲಸು ತಿನ್ನಲ್ಲ ; ಕುರುಬ ತಪ್ಪು ಮಾಡಲ್ಲ – ಸಿಎಂ ಬೆನ್ನಿಗೆ ನಿಂತ ಸ್ವಾಮೀಜಿ

ಕುರಿ ಹೊಲಸು ತಿನ್ನಲ್ಲ ; ಕುರುಬ ತಪ್ಪು ಮಾಡಲ್ಲ – ಸಿಎಂ ಬೆನ್ನಿಗೆ ನಿಂತ ಸ್ವಾಮೀಜಿ

ಹಾವೇರಿ : ಕುರಿ ಹೊಲಸು ತಿನ್ನಲ್ಲ ಕುರುಬ ತಪ್ಪು ಮಾಡಲ್ಲ ರಾಜ್ಯಪಾಲರು ದುರುದ್ದೇಶದಿಂದ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದು ಹೊಸದುರ್ಗ ಕಾಗಿನೆಲೆ ಕನಕಗುರುಪೀಠ ಈಶ್ವರಾನಂದಪುರಿ ಸ್ವಾಮೀಜಿ ಸಿಎಂ ಬೆನ್ನಿಗೆ ನಿಂತಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿಗಳ ಪರವಾಗಿ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಯುತ್ತಿವೆ. ಜೊತೆಗೆ ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟಿಸುವಂತೆ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಕರೆ ಕೊಟ್ಟಿದೆ.

ಈ ಮಧ್ಯೆ ಕುರುಬ ಸಮುದಾಯದ ಹೊಸದುರ್ಗ ಕಾಗಿನೆಲೆ ಕನಕಗುರುಪೀಠ ಈಶ್ವರಾನಂದಪುರಿ ಸ್ವಾಮೀಜಿ ಪತ್ರಿಕಾ‌ ಪ್ರಕಟಣೆ ಮೂಲಕ ಸ್ವಾಮೀಜಿ ಬೆನ್ನಿಗೆ ನಿಂತಿದ್ದಾರೆ. ರಾಜ್ಯಪಾಲರು ತನಿಖೆಗೆ ಆದೇಶ ನೀಡಿದ್ದನ್ನು ಖಂಡಿಸಿರುವ ಶ್ರೀಗಳು ಕುರಿ ಹೊಲಸು ತಿನ್ನಲ್ಲ ಕುರುಬ ತಪ್ಪು ಮಾಡಲ್ಲ ಎಂದಿದ್ದಾರೆ.

ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ದುರುದ್ದೇಶದಿಂದ ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಖಂಡನೀಯ. ಒಂದು ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಹುನ್ನಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಗೌರವ.

ಅಷ್ಟಕ್ಕೂ ಅಧಿಕಾರದಲ್ಲಿರುವುದು ಹಿಂದುಳಿದ ವರ್ಗದ ಪ್ರಬಲ ಜನನಾಯಕ. ಅವರು ದೀನ ದುರ್ಬಲರ, ಮಹಿಳೆಯರ, ಶೋಷಿತರ, ಪರವಾಗಿ ಕೆಲಸ ಮಾಡುತ್ತಿರುವ ನಾಯಕನ ವರ್ಚಸ್ಸು ಮತ್ತು ಜನಪ್ರಿಯತೆಯನ್ನು ಸಹಿಸಲಾಗದ ಪಟ್ಟಬದ್ರ ಹಿತಾಸಕ್ತಿಗಳು ಮಾಡುತ್ತಿರುವ ಕುತಂತ್ರ.

ಇದನ್ನ ರಾಜ್ಯದ ಶೋಷಿತ ಸಮುದಾಯ ಸಹಿಸುವುಲ್ಲ ಯಾವ ಅಕ್ರಮವನ್ನೂ ಮಾಡದ ಸಿದ್ದರಾಮಯ್ಯ ಅವರ ಪರವಾಗಿ ನಾವೆಲ್ಲರೂ ಇರುತ್ತೇವೆ. ಮತ್ತು ಬೃಹತ್ ಜನಾಂದೋಲನ ಮಾಡುವುದಾಗಿಯೂ ಎಚ್ಚರಿಕೆ ನೀಡಲು ಬಯಸುತ್ತೇವೆ ಎಂದು ಹೇಳಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!