ನಕಲಿ ದೂರು ದಾಖಲಿಸಿ ಅಮಾಯಕರು ಜೈಲಿಗೆ ; ಪಿಎಸ್ಐ ಸೇರಿ ನಾಲ್ವರ ಅಮಾನತು
ಬೆಂಗಳೂರು : ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಬೆಂಗಳೂರಿನ ಬನಶಂಕರಿ ಠಾಣೆ ಪಿಎಸ್ಐ ಸೇರಿದಂತೆ ನಾಲ್ವರ ಪೊಲೀಸರ ಅಮಾನತು ಮಾಡಲಾಗಿದೆ.
ಬನಶಂಕರಿ ಠಾಣೆ ಪಿಎಸ್ಐ ಶ್ರೀಧರ್ ಗುಗ್ರಿ, ಎಎಸ್ಐ ಎಸ್.ಕೆ.ರಾಜು, ಕಾನ್ಸ್ಟೇಬಲ್ಗಳಾದ ಸತೀಶ್ ಬಗಲಿ, ತಿಮ್ಮಪ್ಪ ಪೂಜಾರ ಅಮಾನತುಗೊಳಿಸಿ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಆದೇಶ ಹೊರಡಿಸಿದ್ದಾರೆ.
ಸುಳ್ಳು ಮಾಹಿತಿ ನೀಡಿ ದೂರು ದಾಖಲಿಸಿದ್ದ ಬೆಂಗಳೂರಿನ ಸುಬ್ರಹ್ಮಣ್ಯಪುರ ಎಸಿಪಿ ಸ್ಕ್ವಾಡ್ನಿಂದ ರಾಜನ್, ಚೈತ್ರಾ ಕೂಡ ಬಂಧನ ಮಾಡಲಾಗಿದೆ. ಕದಿರೇನಹಳ್ಳಿಯ ಇಬ್ಬರ ವಿರುದ್ಧ ಸುಳ್ಳು ಎನ್ಡಿಪಿಎಸ್ ಕೇಸ್ ದಾಖಲಿಸಿ ಜೈಲು ಕಳುಹಿಸಲಾಗಿತ್ತು. ತನಿಖೆ ನಡೆಸಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದ ಪೊಲೀಸರ ಸಸ್ಪೆಂಡ್ ಮಾಡಲಾಗಿದೆ.
ಸುಳ್ಳು ಮಾಹಿತಿ ನೀಡಿ ದೂರು ದಾಖಲಿಸಿದ್ದ ಬೆಂಗಳೂರಿನ ಸುಬ್ರಹ್ಮಣ್ಯಪುರ ಎಸಿಪಿ ಸ್ಕ್ವಾಡ್ನಿಂದ ರಾಜನ್, ಚೈತ್ರಾ ಕೂಡ ಬಂಧನ ಮಾಡಲಾಗಿದೆ. ಕದಿರೇನಹಳ್ಳಿಯ ಇಬ್ಬರ ವಿರುದ್ಧ ಸುಳ್ಳು ಎನ್ಡಿಪಿಎಸ್ ಕೇಸ್ ದಾಖಲಿಸಿ ಜೈಲು ಕಳುಹಿಸಲಾಗಿತ್ತು.


