ಯತ್ನಾಳ್ ಗೆ ಮೆರವಣಿಗೆಯಲ್ಲಿ ಬಾಗವಹಿಸದಂತೆ ನಿಷೇಧಾಜ್ಞೆ ಹೊರಡಿಸಿದ ಜಿಲ್ಲಾಡಳಿತ
ಬೆಳಗಾವಿ : ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಮತ್ತು ಲಿಂಗಾಯತ ಎಲ್ಲ ಒಳಪಂಗಡಗಳಿಗೆ ಮೀಸಲಾತಿ ನೀಡುವ ಕುರಿತು ಬೆಳಗಾವಿ ನಗರದಲ್ಲಿ ನಡೆಯುವ ಮೆರವಣಿಗೆ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾಗವಹಿಸದಂತೆ ನಿಷೇಧಾಜ್ಞೆ ಹೊರಡಿಸಲಾಗಿದೆ.
ಈ ಕುರಿತು ಬೆಳಗಾವಿ ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದ್ದು.
ಭಾನುವಾರ ಶ್ರೀ ಬಸನಗೌಡ ರಾಮನಗೌಡ ಪಾಟೀಲ್ (ಯತ್ನಾಳ) ಮಾನ್ಯ ಶಾಸಕರು, ವಿಜಯಪುರ ನಗರ ವಿಧಾನಸಭಾ ಕ್ಷೇತ್ರ ಇವರು ಬೆಳಗಾವಿ ನಗರದಲ್ಲಿ ಶ್ರೀ ರಾಜಶೇಖರ. ಕೆ. ಪಾಟೀಲ ಅಧ್ಯಕ್ಷರು ಅಖಿಲ ಭಾರತ
ಲಿಂಗಾಯತ ಪಂಚಮಸಾಲಿ ಮಹಾಸಭಾ ಬೆಳಗಾವಿಯವರು ಆಯೋಜಿಸಿರುವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಮತ್ತು ಲಿಂಗಾಯತ ಎಲ್ಲ ಒಳಪಂಗಡಗಳಿಗೆ ಮೀಸಲಾತಿ ನೀಡುವ ಕುರಿತು ನಡೆಯುವ ಮೆರವಣಿಗೆ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.


