ತಹಶಿಲ್ದಾರ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ನೌಕರ
ಬೆಳಗಾವಿ : ಬೆಳಗಾವಿ ತಹಶಿಲ್ದಾರ ಕಚೇಯಲ್ಲೇ ದ್ವಿತೀಯ ದರ್ಜೆ ಸಹಾಯಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನಗರದ ರಿಸಾಲ್ದಾರ ಗಲ್ಲಿಯಲ್ಲಿಯುವ ತಹಶಿಲ್ದಾರ ಕಚೇರಿಯಲ್ಲಿ ನೌಕರ ರುದ್ರಣ್ಣ ಎಡವಣ್ಣವರ ( 35 ) ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳವಾರ ಬೆಳಿಗ್ಗೆ ಕಚೇರಿಗೆ ಬಂದಿರುವ ನೌಕರ ಕೆಲಸ ಇದೆ ಎಂದು ಕಚೇರಿ ಒಳಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಕುರಿತು ಹಲವು ಅನುಮಾನ ಎಡೆಮಾಡಿಕೊಟ್ಟಿದೆ.


