Select Page

Advertisement

ಭಾರತದಲ್ಲಿ ಗುರುಪರಂಪರೆಗೆ ಮಹತ್ವ ಇದೆ : ನಾಡೋಜ ಡಾ.ಚಂದ್ರಶೇಖರ್ ಕಂಬಾರ್

ಭಾರತದಲ್ಲಿ ಗುರುಪರಂಪರೆಗೆ ಮಹತ್ವ ಇದೆ : ನಾಡೋಜ ಡಾ.ಚಂದ್ರಶೇಖರ್ ಕಂಬಾರ್

ಘಟಪ್ರಭಾ : ನಮ್ಮ ಭಾರತ ದೇಶದಲ್ಲಿ ಗುರುವಿನ ಮೇಲಿನ ಭಕ್ತಿ ಎಂದಿಗೂ ಕಡಿಮೆಯಾಗುವುದಿಲ್ಲ ನಮ್ಮ ಭಾರತದಲ್ಲಿ ಮಾತ್ರ ಗುರುಪರಂಪರೆಯನ್ನು ಗುರುತಿಸಿ, ಗೌರವಿಸುತ್ತಾರೆ ಎಂದು ಜ್ಞಾನಪೀಠ ಪುರಸ್ಕೃತ, ನಾಡೋಜ ಡಾ ಚಂದ್ರಶೇಖರ ಕಂಬಾರ ತಿಳಿಸಿದರು.

ಘಟಪ್ರಭಾ ಎಸ್ ಡಿ ಟಿ ಹೈಸ್ಕೂಲ್ ನ 95ರ ಹಳೇಯ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನೆ ಹಾಗೂ ಹಳೆ ವಿದ್ಯಾರ್ಥಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನಾ ಸಮಾರಂಭಕ್ಕೆ ದೀಪ ಬೆಳಗಿಸಿವುದರ ಮೂಲಕ ಚಾಲನೆ ನೀಡಿ ಮಾತನಾಡಿ. ಅನ್ನಕ್ಕೆ ದಾರಿ ದೀಪವಾದ ಗುರುಗಳನ್ನು ದೇವರೆಂದು ಭಾವಿಸುತ್ತೇವೆ. ದೇವರಿಗೆ ಸಮನಾದ ಗುರುಗಳನ್ನು 30 ವರ್ಷಗಳ ನಂತರವೂ ತಾವೆಲ್ಲರೂ ಸೇರಿ ನೆನಪಿಸಿಕೊಂಡು ಗೌರವಿಸುತ್ತಿರುದೇ ಈ ನೆಲದ ನಾಡಿನ ಸಂಸ್ಕೃತಿ ಎತ್ತಿ ತೋರಿಸುತ್ತದೆ ಎಂದರು.

ಹಳೆಯ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಬೈಲಹೊಂಗಲ ಎ ಸಿ ಪ್ರಭಾವತಿ ಪಕೀರಪೂರ, ನಡೆದು ಬಂದ ಹಾದಿ ಮರೆತು ನಡೆಯುವುದು ಆದರ್ಶವಲ್ಲ. ಹಳೇ ವಿದ್ಯಾರ್ಥಿಗಳಿಗೆ ಶಾಲೆ, ಗುರುಗಳ ಮೇಲಿರುವ ಪ್ರೀತಿ ನಿಜಕ್ಕೂ ಶ್ಲಾಘನೀಯ ಎಂದು ಅಭಿಪ್ರಾಯ ಪಟ್ಟರು.
ಅರಭಾವಿ ಮಠದ ಗುರುಬಸವಲಿಂಗ ಮಹಾಸ್ವಾಮಿಗಳು ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು. ಈ ಸಂಘದ ಮೂಲಕ ಬಡವರ ಮಕ್ಕಳ ವಿದ್ಯಾಭ್ಯಾಸಕ್ಕೆ ದಾರಿ ಸುಗಮವಾಗಲಿ ಎಂದು ಆಶೀರ್ವದಿಸಿದರು.

ಸಂಘದ ಅಧ್ಯಕ್ಷರಾದ ಶ್ರೀ ಕೆ ಎಸ್ ನಾಗರಾಜ್ ಮಾತನಾಡಿ ಸಂಘ ಮತ್ತು ಸಂಸ್ಥೆ ಮಠ ಹಾಗೂ ವಿದ್ಯಾರ್ಥಿಗಳ ಶಿಕ್ಷಣ
ಆರೋಗ್ಯ ತರಬೇತಿ ಹೀಗೆ ಹಲವಾರು ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನ ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸದರು. ಹೈಸ್ಕೂಲ್ ನಲ್ಲಿ ಕಲಿತು ಉನ್ನತ ಹುದ್ದೆಯಲ್ಲಿರುವ ವಿದ್ಯಾರ್ಥಿಗಳಾದ ಡಾ.ನಾಗರಾಜ್ ಚರಂತಿಮಠ, ವಿದ್ಯಾನಂದ ನಾಯಿಕ, ಭಾಗ್ಯಶ್ರೀ ಪಡೆಪ್ಪಗೋಳ ರವರನ್ನು ಎಸ್ ಡಿ ಟಿ ಹೈಸ್ಕೂಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅರ್ಜುನ ಸಂಪಗಾರ, ಗೀತಾ ಬೆನವಾಡಿ, ಶೇಖರ ಬೇಟಗೇರಿ, ಕುಮಾರಯ್ಯ ಕರ್ಪೂರಮಠ, ವಿಜಯಕುಮಾರ್ ಬಡಕುಂದ್ರಿ, ಸಂಜೀವ ನಾಯಿಕ, ಸೋಮಶೇಖರ ಜಿನರಾಳೆ, ಪ್ರಕಾಶ ಮಟಗಾರ, ಜಯಪ್ರಕಾಶ್ ಕಾಡದವರ, ಸುವರ್ಣ ಗಾಡಿವಡ್ಜರ ಮತ್ತು ನಿವೇದಿತಾ ಚರಂತಿಮಠ ಭಾಗವಹಿಸಿದ್ದರು. ಸುಮಾರು 30 ವರ್ಷಗಳಲ್ಲಿ ಪಾಠ ಮಾಡಿದ್ದ ನಿವೃತ್ತ ಶಿಕ್ಷಕರು, ಉಪನ್ಯಾಸಕರನ್ನು ಪ್ರೀತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

Advertisement

Leave a reply

Your email address will not be published. Required fields are marked *

error: Content is protected !!