ಸಿ.ಟಿ ರವಿ ಮೇಲೆ ಹಲ್ಲೆ ಯತ್ನ ; ಆರೋಪಿಗಳ ವಿರುದ್ಧ ಪ್ರಕರಣ ದಾಖಲು
ಬೆಳಗಾವಿ : ಬೆಳಗಾವಿ ಸುವರ್ಣಸೌಧದಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿ. 19 ರಂದು ಸಂಜೆ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಸಭೆ ಮೊಗಸಾಲೆಯಿಂದ ವಿಧಾನಪರಿಷತ್ ಗೆ ತೆರಳುವ ಸಂದರ್ಭದಲ್ಲಿ ಹತ್ತು ಜನ ಅನಾಮಧೇಯ ವ್ಯಕ್ತಿಗಳು ಪರಿಷತ್ ಸದಸ್ಯರಾದ ಕಿಶೋರ ಬಿ.ಆರ್ ಹಾಗೂ ಸಿ.ಟಿ ರವಿ ಅವರಿಗೆ ಜೀವ ಬೆದರಿಕೆ ಮತ್ತು ಯಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.


