ಕಾಗವಾಡ : ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿ
ಕಾಗವಾಡ : ಚಾಲಕನ ನಿರ್ಲಕ್ಷ್ಯದಿಂದ ಕರ್ನಾಟಕ ಸಾರಿಗೆ ಬಸ್ ಪಲ್ಟಿಯಾಗಿದ್ದು ಸುಮಾರು 23 ಜನ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಮಿರಜ್ ನಿಂದ ಸಿಂಧಗಿ ಕಡೆ ಹೊರಟಿದ್ದ ವಾಯ್ಯವ್ಯ ಕರ್ನಾಟಕ ಸಾರಿಗೆ ಬಸ್ ಮಹಿಶಾಳ ಬಳಿ ಲಾರಿ ತಪ್ಪಿಸುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ 40 ಜನ ಪ್ರಯಾಣಿಸುತ್ತಿದ್ದರು.
ಘಟನೆಯಲ್ಲಿ 23 ಜನರಿಗೆ ಗಾಯವಾಗಿದ್ದು ಇವರನ್ನು ಮಿರಜ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


