ಬೈಲಹೊಂಗಲದಲ್ಲಿ ಬಿ.ಎಸ್ ಯಡಿಯೂರಪ್ಪ ಹುಟ್ಟುಹಬ್ಬ ಆಚರಣೆ
ಬೈಲಹೊಂಗಲ : ದಕ್ಷಿಣ ಕರ್ನಾಟಕದಲ್ಲಿ ಕಮಲ ಅರಳಿಸುವಲ್ಲಿ ಯಶಸ್ವಿಯಾದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಹುಟ್ಟು ಹಬ್ಬವನ್ನು ಮಾಜಿ ಶಾಸಕ ಜಗದೀಶ್ ಮೆಟಗುಡ್ಡ ಅವರ ನೇತೃತ್ವದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಗುರುವಾರ ಬೈಲಹೊಂಗಲ ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಂಪಲು ವಿತರಿಸಲಾಯಿತು. ನಂತರ ಸಸಿ ನೆಟ್ಟು ಯಡಿಯೂರಪ್ಪ ಅವರ ಹೆಸರಿನಲ್ಲಿ ಸಸಿ ನೆಟ್ಟು ಸಂಭ್ರಮಿಸಲಾಯುತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಸುಭಾಸ ತುರಮರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ,
ಸಹಕಾರ ಪ್ರಕೋಷ್ಠ ಜಿಲ್ಲಾ ಸಂಚಾಲಕ ಸುನೀಲ ಮರಕುಂಬಿ, ಹಿರಿಯ ಮುಖಂಡ ಗುರುಪಾದ ಕಳ್ಳಿ, ಓಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಹಡಪದ, ಜಿಲ್ಲಾ ಮಾಧ್ಯಮ ಸಂಚಾಲಕ ಸಚೀನ ಕಡಿ.
ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರಗಿ,ಮುಖಂಡರಾದ ಅಜ್ಜಪ್ಪ ಹೊಸೂರ, ರವಿ ಹೊಸೂರ, ನಾಗಪ್ಪ ಸಂಗೊಳ್ಳಿ, ಬಸವರಾಜ ಬೈಲವಾಡ,ಶಿವಯೋಗಿ ಹುಲ್ಯನವರ, ಮೋಹನ ಒಕ್ಕುಂದ, ಸಿ ಜಿ ವಿಭೂತಿಮಠ, ವಿನಾಯಕ ಕಬ್ಬಲಗಿ, ರಾಮಣ್ಣ ಬಳಿಗಾರ, ಅಮರನಾಥ ನೀಲನ್ನವರ, ಬಸವರಾಜ ಶಿಲಯ್ಯನವರಮಠ, ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.


