Select Page

Advertisement

ನರ್ಸಿಂಗ್ ವಿದ್ಯಾರ್ಥಿನಿ ಅಪಹರಣ ಆರೋಪ ; ಮುಸ್ಲಿಂ ಯುವಕನ ವಿರುದ್ಧ ಭುಗಿಲೆದ್ದ ಆಕ್ರೋಶ

ನರ್ಸಿಂಗ್ ವಿದ್ಯಾರ್ಥಿನಿ ಅಪಹರಣ ಆರೋಪ ; ಮುಸ್ಲಿಂ ಯುವಕನ ವಿರುದ್ಧ ಭುಗಿಲೆದ್ದ ಆಕ್ರೋಶ

ಬೆಳಗಾವಿ : ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಯುವತಿಯನ್ನು ಯುವಕನೋರ್ವ ಅಪಹರಣ ಮಾಡಿರುವ ಗಂಭೀರ ಆರೋಪ ಕೇಳಿಬಂದಿದ್ದು, ಇದರಿಂದ ಯುವಕನ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಾರೆ ಕೆಲಸ ಮಾಡ್ತಿದ್ದ ಸದ್ರುದಿನ್ ಬೇಪಾರಿ ಎಂಬಾತನ ವಿರುದ್ಧ ಯುವತಿ ಕುಟುಂಬದವರು ಅಪಹರಣದ ಆರೋಪ ಹೊರಿಸಿದ್ದಾರೆ.

17 ದಿನಗಳ ಹಿಂದೆ ಹಿಂದೂ ಹುಡುಗಿಯನ್ನು ಸದ್ರುದ್ದೀನ್ ಎಂಬಾತ ಅಪಹರಿಸಿ ಕರೆದೊಯ್ದಿದ್ದಾನೆ ಎಂದು ದೂರಲಾಗಿದೆ. ಈ ಹಿನ್ನೆಲೆ ಆಕ್ರೋಶಗೊಂಡ ಯುವತಿ ಕುಟುಂಬಸ್ಥರು ಯುವಕನ ಮನೆ ವಿರುದ್ಧ ಕಲ್ಲು ತೂರಾಟ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ

ಸದ್ರುದ್ದೀನ್‌ ಭೇಪಾರಿ ಎಂಬ ಯುವಕ ಮತ್ತು ನರ್ಸಿಂಗ್‌ ಓದುತ್ತಿದ್ದ ಯುವತಿ ನಡುವೆ ಸ್ನೇಹ ಬೆಳೆದಿತ್ತು. ನಂತರ ಈ ಸ್ನೇಹ ಪ್ರೀತಿಗೆ ತಿರುಗಿ ಎರಡರಿಂದ ಮೂರು ವರ್ಷಗಳೇ ಕಳೆದಿತ್ತು. ‌ಇದನ್ನು ಆಕ್ಷೇಪಿಸಿದ ಬಳಿಕ ಇವರಿಬ್ಬರೂ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Advertisement

Leave a reply

Your email address will not be published. Required fields are marked *

error: Content is protected !!