ಅಗ್ನಿ ದುರಂತ ; ಹೊತ್ತಿ ಉರಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ..!
ನಿಪ್ಪಾಣಿ : ಅಗ್ನಿ ಅವಘಡ ಸಂಭವಿಸಿ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ ಹೊತ್ತಿ ಉರಿದ ಘಟನೆ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ.
ಶುಕ್ರವಾರ ಮಧ್ಯಾಹ್ನ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆಗೆ ಬೆಂಕಿ ತಗುಲಿದೆ. ಕೂಡಲೇ
ನಿಪ್ಪಾಣಿ, ಚಿಕ್ಕೋಡಿ, ಸಂಕೇಶ್ವರ ಪಟ್ಟಣಗಳಿಂದ ಆಗಮಿಸಿದ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯ ಮಾಡಿವೆ.
ಬೆಂಕಿ ಕೆನ್ನಾಲಿಗೆ ಕಂಡು ಕಾರ್ಖಾನೆ ಸಿಬ್ಬಂದಿಗಳು ಕ್ಷಣಹೊತ್ತು ದಿಕ್ಕು ತೋಚದಂತಾದರು. ಘಟನೆಯಲ್ಲಿ ಕಾರ್ಮಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಕೋಟ್ಯಾಂತರ ರೂ. ನಷ್ಟ ಸಂಭವಿಸಿದ್ದು, ನಿಪ್ಪಾಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


