ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ ; ವಿಜಯಪುರದಲ್ಲಿ ಸಂಭ್ರಮಾಚರಣೆ
ದೆಹಲಿ : ಪದೇ,ಪದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ ಯತ್ನಾಳ್ ಉಚ್ಚಾಟನೆ ನಂತರ ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ಬಿಜೆಪಿ ಹಿರಿಯ ನಾಯಕರ ವಿರುದ್ಧ ಅನವಶ್ಯಕ ಆರೋಪ ಮಾಡಿ ಪಕ್ಷದಕ್ಕೆ ಮುಜುಗರ ತಂದಿದ್ದ ಯತ್ನಾಳ್ ಅವರನ್ನು ಬಿಜೆಪಿ ಹೈಕಮಾಂಡ್ 6 ವರ್ಷದ ವರೆಗೆ ಉಚ್ಚಾಟನೆ ಮಾಡಿದೆ.
ಈ ಹಿಂದೆ ಬಿಜೆಪಿ ಶಿಸ್ತು ಸಮೀತಿ ನೋಟಿಸ್ ನೀಡಿತ್ತು. ಇದಕ್ಕೆ ಯತ್ನಾಳ್ ಉತ್ತರಿಸಿದ್ದರು ನಾಲಿಗೆ ಹರಿಬಿಡುವ ಕೆಲಸ ನಿಲ್ಲಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಹೈಕಮಾಂಡ್ ಕ್ರಮ ಕೈಗೊಂಡಿದೆ.


