ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ಉಪವಿಭಾಗದ ಡಿವೈಎಸ್ಪಿ ಆಗಿ ಡಾ. ವೀರಯ್ಯ ಹಿರೇಮಠ ಅವರನ್ನು ನೇಮಕ ಮಾಡಿ ಗುರುವಾರ ಸರ್ಕಾರ ಆದೇಶ ಹೊರಡಿಸಿದೆ.

ಪೊಲೀಸ್ ಪ್ರಧಾನ ಕಚೇರಿಯ ಕಾನೂನು ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನು ಸಾರ್ವಜನಿಕ ಆಡಳಿತಾತ್ಮಕ ಹಿತದೃಷ್ಟಿಯಿಂದ ನೇಮಕ ಮಾಡಲಾಗಿದೆ.

ಸದ್ಯ ಡಿವೈಎಸ್ಪಿ ಆಗಿರುವ ರವಿ‌ ನಾಯ್ಕ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.