ಭದ್ರತಾ ದೃಷ್ಟಿಯಿಂದ ಐಪಿಎಲ್ ಪಂದ್ಯ ರದ್ದು
ನವದೆಹಲಿ : ಭಾರತ ಹಾಗೂ ಪಾಕಿಸ್ತಾನ ನಡುವೆ ಉಂಟಾದ ಸಂಘರ್ಷದ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಉಳಿದ ಎಲ್ಲಾ ಐಪಿಎಲ್ ಪಂದ್ಯಗಳನ್ನು ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ.
ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದ ಐಪಿಎಲ್ ಟೂರ್ನಿ ಕೊನೆಯ ಹಂತಕ್ಕೆ ಬಂದಿತ್ತು. ಆದರೆ ನಿನ್ನೆ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನಲೆಯಲ್ಲಿ ದೆಹಲಿ ಹಾಗೂ ಪಂಜಾಬ್ ನಡುವೆ ನಡೆಯುತ್ತಿದ್ದ ಪಂದ್ಯವನ್ನು ತಾತ್ಕಾಲಿಕವಾಗಿ ತಡೆಯಲಾಗಿತ್ತು.
ಬೇರೆ ದೇಶದ ಆಟಗಾರರು ಐಪಿಎಲ್ ನಲ್ಲಿ ಪಾಲ್ಗೊಂಡಿರುವ ಹಿನ್ನಲೆಯಲ್ಲಿ ಹೊರ ದೇಶದ ಆಟಗಾರರನ್ನು ಕಳುಹಿಸಿಕೊಡುವ ಸಾಧ್ಯತೆಯೂ ಇದೆ.


