ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ; ಸಾವಿನ ಸಂಖ್ಯೆ 7 ಕ್ಕೆ ಏರಿಕೆ
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ RCB ತಂಡದ ವಿಜಯೋತ್ಸವ ಸಂಭ್ರಮಕ್ಕೆ ಅಸಂಖ್ಯಾತ ಅಭಿಮಾನಿಗಳು ಆಗಮಿಸಿದ್ದು ಈ ವೇಳೆ ಕ್ರೀಡಾಂಗಣದ ಒಳಗೆ ಹೋಗುವ ವೇಳೆ ಕಾಲ್ತುಳಿತ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ಏಳು ಜನ ಆರ್ ಸಿ ಬಿ ಅಭಿಮಾನಿಗಳು ಮೃತಪಟ್ಟಿದ್ದು ತಿಳಿದುಬಂದಿದ್ದು ಕೆಲವರ ಸ್ಥಿತಿ ಚಿಂತಜನಕವಾಗಿದೆ. ಗಾಯಾಳುಗಳನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದು ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಯುವಕರು ಏಕಾಏಕಿ ಕ್ರೀಡಾಂಗಣ ಒಳ ಹೋಗಲು ಪ್ರಯತ್ನಿಸಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಈಗಾಗಲೇ ಏಳು ಜನ ಮೃತಪಟ್ಟಿದ್ದು ದೃಢವಾಗಿದೆ.


