ಮಂಡ್ಯ : ಮಸೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಭಾಗವಹಿಸಿ ವಾಪಸ್ ಬೆಂಗಳೂರಿಗೆ ಬರುವ ವೇಳೆ ಡಿಸಿಎಂ ಡಿಕೆಶಿ ಅವರಿದ್ದ ಬೆಂಗಾಲವಲು ವಾಹನ ಪಲ್ಟಿಯಾಗಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗೌಡಹಳ್ಳಿ ಟಿಎಂ ಹೊಸೂರ ಬಳಿ ಡಿಕೆಶಿ ಬೆಂಗಾವಲು ವಾಹನ ಬರುವ ವೇಳೆ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿದೆ.
ಎಸ್ಕಾರ್ಟ್ ವಾಹನ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ.
ಡಿಕೆಶಿ ಅವರಿದ್ದ ಕಾರಿಗೆ ಯಾವುದೇ ತೊಂದರೆಯಾಗಿಲ್ಲ.
BREAKING : ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ



