ಬೆಳಗಾವಿಯಲ್ಲಿ ತಪ್ಪಿದ ವಿಮಾನ ದುರಂತ ; ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ
ಬೆಳಗಾವಿ : ಬೆಳಗಾವಿಯಲ್ಲಿ ಭಾರಿ ಅನಾಹುತ ಒಂದು ತಪ್ಪಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನಲೆ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
ಇಂಜಿನ್ ನಲ್ಲಿ ಪೆಟ್ರೋಲ್ ಲೀಕ್ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದ್ದು ಬೆಳಗಾವಿಯಿಂದ ಮುಂಬೈಗೆ ಹೊರಟ್ಟಿದ್ದ ಸ್ಟಾರ್ ಏರ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ.
ಸ್ಟಾರ್ ಏರ್ ನ S5111.ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು ವಿಮಾನದಲ್ಲಿ ಬೆಳಗಾವಿಯಿಂದ ಮುಂಬೈಗೆ 41 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ಬೆಳಗಾವಿಯಿಂದ ಮುಂಬೈ ಗೆ ಹೊರಟಿದ್ದ ವಿಮಾನದಲ್ಲಿ ಅಜಯ್ ಸುತಾರ್, ವೈಷ್ಣವ ಶಾನಭಾಗ್, ನಾರಾಯಣ ಡೆಲ್, ಸೇರಿದಂತೆ ಸುಮಾರು 41 ಜನ ಪ್ರಯಾಣಿಕರಿದ್ದರು.
ವಿಮಾನ ಮೇಲೆಕ್ಕೆ ಹಾರುತ್ತಿದ್ದಂತೆ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ಫೈಲಟ್ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ್ದಾರೆ. ಎಲ್ಲಾ 41 ಪ್ರಯಾಣಿಕರರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.


