Select Page

Advertisement

ಪಿಎಸ್ಐ ಪಿಸ್ತೂಲ್ ನಿಂದ ಹಾರಿದ ಗುಂಡು, ಆತ್ಯಾಚಾರ ಆರೋಪಿ ವಶಕ್ಕೆ

ಪಿಎಸ್ಐ ಪಿಸ್ತೂಲ್ ನಿಂದ ಹಾರಿದ ಗುಂಡು, ಆತ್ಯಾಚಾರ ಆರೋಪಿ ವಶಕ್ಕೆ

ಬೆಳಗಾವಿ : ದರೋಡೆ, ಗ್ಯಾಂಗ್ ರೇಪ್ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಹೊರ ವಲಯದಲ್ಲಿ ಶನಿವಾರ ನಸುಕಿನ ಜಾವ ನಡೆದಿದೆ.

ಆರೋಪಿ ರಮೇಶ್ ಕಿಲ್ಲಾರ್ ಗೆ ಬೆಳಗಿನ ಜಾವ 6 ಗಂಟೆಗೆ ಆರೋಪಿ ಬಂಧಿಸಲು ಹೋದಾಗ ಘಟನೆ ನಡೆದಿದೆ. ಪೊಲೀಸ್ ಪೊಲೀಸ್ ಪೇದೆ ಷರೀಫ್ ದಫೇದಾರ್ ಗೆ ಚಾಕು ಇರಿದು ಪರಾರಿಯಾಗುವ ವೇಳೆ

ಗಾಳಿಯಲ್ಲಿ ಗುಂಡು ಹಾರಿಸಿ ಪಿಎಸ್‌ಐ ಪ್ರವೀಣ್ ಗೊಂಗೊಳ್ಳಿ ಎಚ್ಚರಿಕೆ ನೀಡಿದರೂ ದಾಳಿ ಮಾಡಿ ತಪ್ಪಿಸಿಕೊಳ್ಳಲು ‌ಪ್ರಯತ್ನ ಹಿನ್ನೆಲೆ ಆರೋಪಿ ಕಾಲಿಗೆ ಗುಂಡೇಟು ನೀಡಿದ್ದಾರೆ.

ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ, ಅಕ್ರಮ ಶಸ್ತ್ರಾಸ್ತ್ರ ಸೇರಿ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗೆ ಗುಂಡಿನ ಏಟು ನೀಡಿದ್ದಾರೆ. ಗಾಯಗೊಂಡ ಆರೋಪಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Leave a reply

Your email address will not be published. Required fields are marked *

error: Content is protected !!