ಡಿಸಿಸಿ ಬ್ಯಾಂಕ್ ಚುನಾವಣೆ : 6 ಜನ ಅವಿರೋಧ ಆಯ್ಕೆ, ಬಾಲಚಂದ್ರ ಜಾರಕಿಹೊಳಿ ಮೇಲುಗೈ..!
ಬೆಳಗಾವಿ : ಡಿಸಿಸಿ ಬ್ಯಾಂಕ್ ನಿರ್ದೇಶ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣಾ ನಾಮಪತ್ರ ಸಲ್ಲಿಕೆ ಸಮಯ ಮುಕ್ತಾಯವಾಗಿದ್ದು 6 ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಬಾಲಚಂದ್ರ ಜಾರಕಿಹೊಳಿ ಬಣದ ಯರಗಟ್ಟಿ ವಿಶ್ವಾಸ ವೈದ್ಯ, ಮೂಡಲಗಿಯ ನಿಲಕಂಠ ಕಪ್ಪಲಗುದ್ದಿ, ಸವದತ್ತಿಯಿಂದ ವಿರೂಪಾಕ್ಷ ಮಾಮನಿ, ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ ಜಾರಕಿಹೊಳಿ, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ, ಚಿಕ್ಕೋಡಿ – ಗಣೇಶ ಹುಕ್ಕೇರಿ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬರುವ ಅಕ್ಟೋಬರ್ 13 ರಂದು ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನಾಂಕ ಇದ್ದು ಅಂದೇ ಈ ಅಭ್ಯರ್ಥಿಗಳ ಅವಿರೋಧ ಘೋಷಣೆ ಇದೆ.


