ವಿಮಾನ ಅಪಘಾತದಲ್ಲಿ ಬಲಿಯಾದವರ ಪೈಕಿ ಕ್ಯಾಪ್ಟನ್ ಶಾಂಭವಿ ಪಾಠಕ್ ಒಬ್ಬರು..!

ಮುಂಬೈ : ಬಾರಾಮತಿಯಲ್ಲಿ ಸಂಭವಿಸಿದ್ದ ಭೀಕರ ವಿಮಾನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕ್ಯಾಪ್ಟನ್ ಶಾಂಭವಿ ಪಾಠಕ್ ಕೂಡ ಒಬ್ಬರು.
ಮುಂಬೈ ನಿಂದ ಪುಣೆಯ ಬಾರಾಮತಿಗೆ ಬಂದಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಅಪಘಾತ ಸಂಭವಿಸಿತ್ತು. ಈ ವೇಳೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಆದರೆ ಈ ಅಪಘಾತದಲ್ಲಿ ಪೈಲಟ್ ಶಾಂಭವಿ ಪಾಠಕ್ ಮೃತಪಟ್ಟಿದ್ದಾರೆ.
ಶಾಂಭವಿ ಪಾಠಕ್ ಅವರು ಮುಂಬೈ ವಿಶ್ವವಿದ್ಯಾಲಯದಿಂದ ಏರೋನಾಟಿಕ್ ಏವಿಯೇಷನ್ ಮತ್ತು ಏರೋಸ್ಪೇಸ್ ಸೈನ್ಸ್ & ಟೆಕ್ನಾಲಜಿಯಲ್ಲಿ ಬಿಎಸ್ಸಿ ಪದವಿ ಪಡೆದು ಪೈಲಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಅಪಘಾತದಲ್ಲಿ ಮೃತಪಟ್ಟವರು : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್, ಖಾಸಗಿ ಭದ್ರತಾ ಅಧಿಕಾರಿ ವಿಧಿತ್ ಜಾಧವ್, ಪೈಲಟ್ ಗಳಾದ ಸುಮಿತ್ ಕಪೂರ್, ಶಾಂಭವಿ ಪಾಠಕ್ ಹಾಗೂ ಓರ್ವ ವಿಮಾನ ಸಿಬ್ಬಂದಿ ಮೃತಪಟ್ಟಿದ್ದಾರೆ.

