ಹಿಂದೂ ಶೋಭಾ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ಕಾಂಗ್ರೆಸ್ ಶಾಸಕ ; ಪಾಟೀಲರ ನಡೆಗೆ ಮೆಚ್ಚುಗೆ…!
ಬೆಳಗಾವಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೂರನೇ ವರ್ಷಾಚರಣೆ ಹಿನ್ನಲೆಯಲ್ಲಿ ಚೆನ್ನಮ್ಮನ ಕಿತ್ತೂರಿನಲ್ಲಿ ಆಯೋಜಿಸಿದ್ದ ಶೌರ್ಯ ಹಿಂದೂ ಸಮ್ಮೇಳನ ಹಾಗೂ ಬೃಹತ್ ಶೋಭಾಯಾತ್ರೆ ಕಾರ್ಯಕ್ರಮ ಜರುಗಿತು.
ಈ ವೇಳೆ ಕಾಂಗ್ರೆಸ್ ಕಿತ್ತೂರು ಕಾಂಗ್ರೆಸ್ ಶಾಸಕ ಬಾಬಾಸಾಹೇಬ್ ಪಾಟೀಲ್ ಕೆಂಪು ಶಲ್ಯೆ ಹಾಕಿಕೊಂಡು ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದು ವಿಶೇಷವಾಗುತ್ತು.
ಕಾಂಗ್ರೆಸ್ ಪಕ್ಷದ ಶಾಸಕರಾಗಿ ಹಿಂದೂ ಸಮಾಜೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಉತ್ತಮ ನಡೆ ತೋರಿದ ಶಾಸಕ ಬಾಬಾಸಾಹೇಬ್ ಪಾಟೀಲರಿಗೆ ಎಲ್ಲೆಡೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ.


