Select Page

Advertisement

ಗಂಗಾ ಕಲ್ಯಾಣ ಯೋಜನೆ 2026: ರೈತರಿಗೆ ಉಚಿತ ಬೋರ್‌ವೆಲ್ ಸೌಲಭ್ಯ – ಅರ್ಜಿ ಸಲ್ಲಿಕೆ ಹೇಗೆ?

ಗಂಗಾ ಕಲ್ಯಾಣ ಯೋಜನೆ 2026: ರೈತರಿಗೆ ಉಚಿತ ಬೋರ್‌ವೆಲ್ ಸೌಲಭ್ಯ – ಅರ್ಜಿ ಸಲ್ಲಿಕೆ ಹೇಗೆ?

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗಂಗಾ ಕಲ್ಯಾಣ ಯೋಜನೆ 2026ರಡಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಉಚಿತ ನೀರಾವರಿ ಸೌಲಭ್ಯ ಒದಗಿಸಲು ಅವಕಾಶ ನೀಡಲಾಗಿದೆ. ಈ ಯೋಜನೆಯಡಿ ರೈತರ ಕೃಷಿಭೂಮಿಗೆ ಬೋರ್‌ವೆಲ್ ಕೊರೆಸಲು ಹಾಗೂ ಪಂಪ್‌ಸೆಟ್ ಅಳವಡಿಸಲು ಸರ್ಕಾರದಿಂದ ಆರ್ಥಿಕ ಸಹಾಯ ನೀಡಲಾಗುತ್ತದೆ.

ಯೋಜನೆಯ ಉದ್ದೇಶ ಏನು? ಗಂಗಾ ಕಲ್ಯಾಣ ಯೋಜನೆಯ ಮುಖ್ಯ ಉದ್ದೇಶ ಒಣಭೂಮಿಯ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಿ ಕೃಷಿ ಉತ್ಪಾದನೆ ಹೆಚ್ಚಿಸುವುದು. ಬೋರ್‌ವೆಲ್, ಪಂಪ್‌ಸೆಟ್ ಹಾಗೂ ವಿದ್ಯುದ್ದೀಕರಣದ ವೆಚ್ಚವನ್ನು ಸರ್ಕಾರ ಸಹಾಯಧನ ರೂಪದಲ್ಲಿ ನೀಡುತ್ತದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಳಗಿನ ಅರ್ಹತೆಗಳು ಅಗತ್ಯ:
ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು
ಸಣ್ಣ ಅಥವಾ ಅತಿಸಣ್ಣ ರೈತರಾಗಿರಬೇಕು ಕನಿಷ್ಠ 1 ಏಕರೆ ಅಥವಾ ಅದಕ್ಕಿಂತ ಹೆಚ್ಚು ಭೂಮಿಯನ್ನು ಹೊಂದಿರಬೇಕು ವಯಸ್ಸು 18 ರಿಂದ 55 ವರ್ಷಗಳೊಳಗಿರಬೇಕು‌ ಕುಟುಂಬದ ವಾರ್ಷಿಕ ಆದಾಯ ಸರ್ಕಾರ ನಿಗದಿಪಡಿಸಿದ ಮಿತಿಯೊಳಗಿರಬೇಕು ಅಲ್ಪಸಂಖ್ಯಾತರು, ಹಿಂದುಳಿದ ವರ್ಗ, ಎಸ್‌ಸಿ / ಎಸ್‌ಟಿ ಸಮುದಾಯದ ರೈತರಿಗೆ ಆದ್ಯತೆ ನೀಡಲಾಗುತ್ತದೆ
ಎಷ್ಟು ಸಹಾಯಧನ ಸಿಗುತ್ತದೆ?

ವೈಯಕ್ತಿಕ ಬೋರ್‌ವೆಲ್ ಯೋಜನೆಗೆ ಗರಿಷ್ಠ ₹3.50 ಲಕ್ಷದಿಂದ ₹3.75 ಲಕ್ಷದವರೆಗೆ ಸಹಾಯಧನ ದೊರೆಯಬಹುದು ಬೋರ್‌ವೆಲ್, ಪಂಪ್‌ಸೆಟ್ ಹಾಗೂ ವಿದ್ಯುದ್ದೀಕರಣ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ.

ಅರ್ಜಿ ಸಲ್ಲಿಸುವ ವಿಧಾನ‌ : ಸಂಬಂಧಿತ ಅಭಿವೃದ್ಧಿ ನಿಗಮದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಆನ್‌ಲೈನ್ ಅರ್ಜಿ ಫಾರ್ಮ್ ಭರ್ತಿ ಮಾಡಿ ಸಲ್ಲಿಸಬೇಕು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು
ಅಥವಾ ಜಿಲ್ಲಾ / ತಾಲೂಕು ಕಚೇರಿಯಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು.


ಅಗತ್ಯ ದಾಖಲೆಗಳು –
ಆಧಾರ್ ಕಾರ್ಡ್
ಜಾತಿ ಪ್ರಮಾಣಪತ್ರ
ಆದಾಯ ಪ್ರಮಾಣಪತ್ರ
RTC / ಪಹಣಿ
ಬ್ಯಾಂಕ್ ಪಾಸ್‌ಬುಕ್
ಪಾಸ್‌ಪೋರ್ಟ್ ಗಾತ್ರದ ಫೋಟೋ

ಯೋಜನೆಯ ಲಾಭ ಏನು?
ಈ ಯೋಜನೆಯಿಂದ ರೈತರಿಗೆ ಉಚಿತ ನೀರಾವರಿ ಸೌಲಭ್ಯ ದೊರೆಯುತ್ತದೆ. ಇದರಿಂದ ಬೆಳೆ ಉತ್ಪಾದನೆ ಹೆಚ್ಚಾಗಿ ರೈತರ ಆದಾಯವೂ ಹೆಚ್ಚಾಗುತ್ತದೆ. ಈಗಾಗಲೇ ಸಾವಿರಾರು ರೈತರು ಈ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.


Advertisement

Leave a reply

Your email address will not be published. Required fields are marked *

error: Content is protected !!