ಬೆಳಗಾವಿ : ಬೆಳಗಾವಿ ಬಿಲ್ಲೆಯ ನಿಪ್ಪಾಣಿ ಸಮೀಪದ ಸ್ಥವನಿಧಿ ಘಾಟ್ನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿ ಇಬ್ಬರು ದುರ್ಮಣ ಹೊಂದಿರುವ ಘಟನೆ ನಡೆದಿದೆ.
ಚಲಿಸುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉಳಿದ ಇಬ್ಬರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮೃತರನ್ನು ಮಹಾರಾಷ್ಟ್ರದ ಕೊಲ್ಹಾಪೂರ ನಿವಾಸಿ ಸೋಯಲ್ ಮುನೇರ (36) ಹಾಗೂ ಇಂಚಲಕರಂಜಿ ಗ್ರಾಮದ ನಿವಾಸಿ ವಿನಯ ಪಾಟೀಲ್ ಎಂದು ಗುರುತಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ನಿಪ್ಪಾಣಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.


