ಮಲಗಿದ್ದವರ ಮೇಲೆ ಹರಿದ ಜೆಸಿಬಿ ; ಸ್ಥಳದಲ್ಲೇ ಮೂವರ ದಾರುಣ ಸಾವು
ರಾಯಚೂರು : ಮಲಗಿದ್ದವರ ಮೇಲೆ ಜೆಸಿಬಿ ಹರಿದು ಸ್ಥಳದಲ್ಲೇ ಮೂವರ ದಾರುಣ ಸಾವು ಉಂಟಾದ ಘಟನೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ನಿಲವಂಜಿಯಲ್ಲಿ ನಡೆದಿದೆ.
ವಿಷ್ಣು (26), ಶಿವರಾಮ್ (28), ಬಲರಾಮ್(30) ಮೃತ ದುರ್ದೈವಿಗಳು.ಜಮೀನಿನಲ್ಲಿ ಬೋರ್ವೆಲ್ ಕೊರೆದು ಕಾಲುದಾರಿಯಲ್ಲಿ ಮಲಗಿದ್ದ ಸಂದರ್ಭದಲ್ಲಿ.
ರಾತ್ರಿ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ ಹರಿದು ಮೂವರು ಸಾವಣಪ್ಪಿದ್ದಾರೆ.
ನಿಲವಂಜಿ ಗ್ರಾಮದ ಬಾಲಯ್ಯ ಎಂಬುವವರಿಗೆ ಸೇರಿದ ಜೆಸಿಬಿ ಹರಿದ ಪರಿಣಾಮ ಚತ್ತಿಸಗಢ ಮೂಲದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಸ್ಥಳಕ್ಕೆ ದೇವದುರ್ಗ ಪೊಲೀಸ್ ಭೇಟಿ ಪರಿಶೀಲನೆ ನಡೆಸಿದ್ದಾರೆ.


