ಉಡುಪಿ ನಾಲ್ವರ ಕೊಲೆ ಪ್ರಕರಣ ಆರೋಪಿ ಬೆಳಗಾವಿಯಲ್ಲಿ ಅರೆಸ್ಟ್
ಬೆಳಗಾವಿ : ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಆರೋಪಿಯನ್ನು ಬೆಳಗಾವಿಯಲ್ಲಿ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಉಡುಪಿ ಹಾಗೂ ಬೆಳಗಾವಿ ಪೊಲೀಸರ ಸಮನ್ವಯದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿ ಪ್ರವೀಣ್ ಚೌಗಲೆ ಎಂಬುವವನ್ನು ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ಬಂಧಿಸಲಾಗಿದೆ. ಮಹಾರಾಷ್ಟ್ರದ ಕಡೆಗೆ ಹೊರಟ್ಟಿದ್ದ ಸಂದರ್ಭದಲ್ಲಿ ಪೋನ್ ನೆಟ್ವರ್ಕ್ ಆಧರಿಸಿ ಅರೆಸ್ಟ್ ಮಾಡಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿ ಮೂಲದ ಆರೋಪಿ CRPF ಯೋಧನಾಗಿದ್ದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ
ಸೇವೆ ಸಲ್ಲಿಸುತ್ತಿದ್ದ. ಸಧ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಉಡುಪಿಗೆ ಕರೆದೊಯ್ಯುತ್ತಿದ್ದಾರೆ.


