ಡಿಕೆಶಿ ವಿರುದ್ಧ ಯತ್ನಾಳ್ ಸಮರ ; ಕೇಸ್ ವಾಪಸ್ ಪಡೆದಿದ್ದಕ್ಕೆ ಹೈಕೋರ್ಟ್ ಮೆಟ್ಟಿಲೆರಿದ ಪಾಟೀಲ್
ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಪ್ರಕರಣವನ್ನು ಸರ್ಕಾರ ವಾಪಸ್ ಪಡೆದುಕೊಳ್ಳು ನಿರ್ಧಾರ ಕೈಗೊಂಡಿದ್ದು, ಇದರ ವಿರುದ್ಧ ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ವಾಪಸ್ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.
ಆದ್ರೆ, ಇತ್ತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಸರ್ಕಾರದ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಯತ್ನಾಳ್ ನುಡಿದಂತೆ ನಡೆದಿದ್ದಾರೆ.
ವಿಚಾರಣೆಗೆ ಬಾಕಿ ಇರುವಾಗ ಮೇಲ್ಮನವಿಯಲ್ಲೇ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದ್ದು, ಹೈಕೋರ್ಟ್ ವಿಚಾರಣೆಯನ್ನು ನಿಷ್ಪಲಗೊಳಿಸಲು ಯತ್ನಿಸಲಾಗುತ್ತಿದೆ. ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ.
ಈ ಹಂತದಲ್ಲಿ ಸರ್ಕಾರದ ಕ್ರಮ ಕಾನೂನುಬಾಹಿರವಾಗಿದ್ದು, ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಕಾರಣಕ್ಕೆ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.


