Select Page

Advertisement

ಶಿಕ್ಷಣ ಸಚಿವರ ಹೇರ್ ಕಟಿಂಗ್ ಗೆ ಹಣ ಸಂಗ್ರಹಿಸುತ್ತಾ ಬಿಜೆಪಿ..?

ಶಿಕ್ಷಣ ಸಚಿವರ ಹೇರ್ ಕಟಿಂಗ್ ಗೆ ಹಣ ಸಂಗ್ರಹಿಸುತ್ತಾ ಬಿಜೆಪಿ..?

ಬೆಂಗಳೂರು : ಶಿಕ್ಷಣ ಸಚಿವರಿಗೆ ಹಣಕಾಸಿನ ಸಮಸ್ಯೆ ಇದ್ದರೆ ಅವರ ಹೇರ್ ಕಟಿಂಗ್‍ಗೆ ಹಣ ಸಂಗ್ರಹಿಸಿ ಕೊಡಲು ಯುವ ಮೋರ್ಚಾದವರಿಗೆ ಹೇಳುವೆ. ಒಬ್ಬರು ಶಿಕ್ಷಣ ಸಚಿವರು ಹೇಗಿರಬೇಕು? ಅವರು ಮಾದರಿ ಆಗಿರಬೇಕು. ನಮ್ಮ ಶಿಕ್ಷಣ ಸಚಿವರು ಒಂದು ಕಡೆ ನನಗೆ ಕನ್ನಡ ಬರುವುದಿಲ್ಲ ಎನ್ನುತ್ತಾರೆ.
ಮತ್ತೊಂದು ಕಡೆ ಯಾವ ರೀತಿ ಅವಾಂತರ ಮಾಡಿದ್ದಾರೆಂಬುದು ನಿಮಗೂ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ಶಿಕ್ಷಕರ ನೇಮಕಕ್ಕೆ ಖಾಸಗಿ ಕಾರ್ಮಿಕರನ್ನು ಗುತ್ತಿಗೆ ಮಾಡಿಕೊಳ್ಳುವವರಿಗೆ ಜವಾಬ್ದಾರಿ ಕೊಟ್ಟಿದ್ದಾರೆ. ಶಿಕ್ಷಣ ಸಚಿವರು ಎಷ್ಟು ಗಂಭೀರವಾಗಿ ಇಲಾಖೆಯನ್ನು ಪರಿಗಣಿಸಿದ್ದಾರೆಂದು ತಗೊತ್ತಾಗುತ್ತದೆ ಎಂದು ಟೀಕಿಸಿದರು. ಶಿಕ್ಷಕರು- ಮಕ್ಕಳು ಸಮಸ್ಯೆ ಎದುರಿಸುತ್ತಿದ್ದಾರೆ. ಪೋಷಕರೂ ಚಿಂತೆಗೀಡಾಗಿದ್ದಾರೆ. ಇಂಥ ಶಿಕ್ಷಣ ಸಚಿವರು ಬೇಕೇ ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದರು.

ಹಿಂದೆ ಯಡಿಯೂರಪ್ಪ ಅವರು ಬಿಜೆಪಿ ಮುಖ್ಯಮಂತ್ರಿಯಾಗಿದ್ದಾಗ ಹೈನುಗಾರಿಕೆಗೆ ಪ್ರೋತ್ಸಾಹ ನೀಡುತ್ತಿದ್ದರು. ಈ ಸರಕಾರ ಬಂದ ಬಳಿಕ ಕಳೆದ ಅಕ್ಟೋಬರ್‍ನಿಂದ 800 ಕೋಟಿಗೂ ಹೆಚ್ಚು ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದೆ ಎಂದು ಟೀಕಿಸಿದರು.

ಎಸ್‍ಟಿ ಅಭಿವೃದ್ಧಿ ನಿಗಮದ 187 ಕೋಟಿಗೂ ಹೆಚ್ಚು ಮೊತ್ತದ ಹಗರಣ ನಿನ್ನೆ ನಡೆದಿದೆ. ಇಲಾಖೆ ಅಕೌಂಟೆಂಟ್ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದ ಸಿಎಂ, ಡಿಸಿಎಂ ಕಳಕಳಿ, ಪ್ರಾಮಾಣಿಕತೆ ಎಲ್ಲಿ ಹೋಗಿದೆ? ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಮ್ಮ ಸರಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿ, ಒಂದು ಸುಳ್ಳನ್ನು ನೂರು ಬಾರಿ ಹೇಳಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಪಿತಾಮಹರೆಂದು ರುಜುವಾತಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!