ಬೆಳಗಾವಿ : ಭೀಕರ ರಸ್ತೆ ಅಪಘಾತ – ಮೂವರು ಯುವಕರು ಸಾವು
ಚಿಕ್ಕೋಡಿ : ಬೈಕ್ ಮತ್ತು ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಮೃತಪಟ್ಟಿರುವ ಘಟನೆ ಚಿಕ್ಕೋಡಿ ತಾಲೂಕಿನ ಕೇರೂರು ಕ್ರಾಸ್ ಬಳಿ ನಡೆದಿದೆ.
ಮೃತ ಯುವಕರನ್ನು ಕೇರೂರ ಗ್ರಾಮದ ಪ್ರಶಾಂತ ಖೋತ (22), ಸತೀಶ ಹಿರೇಕೊಡಿ(23), ಯಲಗೌಡ ಪಾಟೀಲ (22) ಎಂದು ಗುರುತಿಸಲಾಗಿದೆ.
ಯುವಕರು ಬೈಕ್ ನಲ್ಲಿ ಚಿಕ್ಕೋಡಿ ಕಡೆಯಿಂದ ಕೇರೂರ ಗ್ರಾಮಕ್ಕೆ ತೆರಳುವ ಸಮಯದಲ್ಲಿ ಈಘಟನೆ ಸಂಭವಿಸಿದೆ. ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


