Select Page

Advertisement

ಭೀಕರ ರಸ್ತೆ ಅಪಘಾತ ; ಮೂವರು ಸಾವು

ಭೀಕರ ರಸ್ತೆ ಅಪಘಾತ ; ಮೂವರು ಸಾವು

ತುಮಕೂರು : ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ನಗರ ಸಮೀಪ ಶನಿವಾರ ರಾತ್ರಿ ನಡೆದಿದೆ.

ಕೊರಟಗೆರೆ ಕಡೆಯಿಂದ ತುಮಕೂರು ಕಡೆಗೆ ಐವರು ಕಾರಿನಲ್ಲಿ ತೆರಳುತ್ತಿರುವಾಗ ವಿರುದ್ಧ ದಿಕ್ಕಿನಿಂದ ಬಂದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ
ತಾಲ್ಲೂಕಿನ ಬೆಳಧರ ಬಳಿ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಆಸ್ಪತ್ರೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾನೆ. ಇನ್ನುಳಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೊರಟಗೆರೆ ತಾಲ್ಲೂಕಿನ ಕತ್ತಿನಾಗೇನಹಳ್ಳಿಯ ಶಿವಕುಮಾರ್‌ (28), ಗೋವಿಂದಪ್ಪ (60), ಬೈಚಾಪುರದ ಶಿವಶಂಕರ್‌ (28) ಮೃತರು.

ಕೊರಟೆಗೆರೆ ಮೂಲದ ಐವರು ಕಾರಿನಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ. ಬೈಚಾಪುರದ ಶಿವಶಂಕರ್, ಕತ್ತಿನಾಗೇನಹಳ್ಳಿ ಶಿವಕುಮಾರ್ ಕತ್ತಿನಾಗೇನಹಳ್ಳಿಯ ಗೋವಿಂದಪ್ಪ ಮೃತ ದುರ್ದೈವಿಗಳು. ರೆಡ್ಡಿಹಳ್ಳಿ ಶಂಕರ್, ಕತ್ತಿನಾಗೇನಹಳ್ಳಿ ವೇಣುಗೋಪಾಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!