Select Page

ಹೆದ್ದಾರಿ ಮೇಲೆ ಗುಡ್ಡ ಕುಸಿತ ; ಏಳು ಜನರ ಸಾವು

ಹೆದ್ದಾರಿ ಮೇಲೆ ಗುಡ್ಡ ಕುಸಿತ ; ಏಳು ಜನರ ಸಾವು

ಅಂಕೋಲಾ : ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತವಾಗಿದ್ದು ಏಳು ಜನ ಮೃತಪಟ್ಟ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಸಂಭವಿಸಿದ್ದು ಈ ಸಂದರ್ಭದಲ್ಲಿ ಒಂಬತ್ತು ಜನ ನಾಪತ್ತೆಯಾಗಿದ್ದರು. ಸಧ್ಯ ಇದರಲ್ಲಿ ಏಳು ಜನ ಮೃತಪಟ್ಟಿದ್ದಾರೆ.

9 ಮಂದಿಯ ಪೈಕಿ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ, ರೋಷನ್​, ಆವಂತಿಕಾ, ಜಗನ್ನಾಥ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್​ಡಿಆರ್​ಎಫ್ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ‌ ವಾಹನ ಸಂಚಾರ ಸ್ಥಗಿತಗೊಂಡಿದೆ.

ಈ ಕುರಿತು ಉತ್ತರ ಕನ್ನಡ ‌ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದು. ಶಿರೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತವಾಗಿದ್ದು ಈಗಾಗಲೇ ತೆರವು ಕಾರ್ಯ ಕೈಗೊಳ್ಳಲಾಗಿದೆ. ಘಟನೆಯಲ್ಲಿ ಕಣ್ಮರೆಯಾಗಿದ್ದ ಒಂಬತ್ತು ಜನರಲ್ಲಿ ಏಳು ಜನ ಮೃತಪಟ್ಟಿದ್ದು ಶೋಧ ಕಾರ್ಯ ಮುಂದುವರೆದಿದೆ ಎಂದರು.

Advertisement

Leave a reply

Your email address will not be published. Required fields are marked *

error: Content is protected !!