ಅಥಣಿ : ಕಬ್ಬು ಕತ್ತರಿಸುವ ಬೃಹತ್ ಯಂತ್ರಕ್ಕೆ ಸಿಲುಕಿ ರೈತ ಮಹಿಳೆ ಮೃತಪಟ್ಟ ಘಟನೆ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ನಡೆದಿದೆ.
ಶೋಭಾ ಶ್ರೀಕಾಂತ ಸಂಕ್ರಟ್ಟಿ (54) ಮೃತಪಟ್ಟ ಮಹಿಳೆ. ಸ್ವಂತ ಜಮೀನಿನಲ್ಲಿ ಕಬ್ಬು ಕಟಾವು ಮಾಡುವ ವೇಳೆ ಯಂತ್ರದ ಬುಡಕ್ಕೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾಳೆ.
ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.