Select Page

ಅಥಣಿ : ಯುನಿಯನ್ ಅಧ್ಯಕ್ಷನ ಮೇಲೆ ಮಾರಣಾಂತಿಕ ಹಲ್ಲೆ ; ಶಾಸಕ ಸವದಿ ಕುಟುಂಬದ ವಿರುದ್ಧ ಗಂಭೀರ ಅರೋಪ..!

ಅಥಣಿ : ಯುನಿಯನ್ ಅಧ್ಯಕ್ಷನ ಮೇಲೆ ಮಾರಣಾಂತಿಕ ಹಲ್ಲೆ ; ಶಾಸಕ ಸವದಿ ಕುಟುಂಬದ ವಿರುದ್ಧ ಗಂಭೀರ ಅರೋಪ..!



ಬೆಳಗಾವಿ : ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ್ಯ ನಿಂಗಪ್ಪ ಕರೆಣ್ಣವರ ಗಂಭೀರ ಆರೋಪ ಮಾಡಿದ್ದಾರೆ.

ಕೆಲಸದ ವಿಚಾರವಾಗಿ ಅವರ ಮನೆಗೆ ಹೋದ ಸಂದರ್ಭದಲ್ಲಿ ನಮ್ಮ ಮನೆಗೆ ಏಕೆ ಬಂದೆ ಎಂದು ನನ್ನ ತಲೆ ಒಡೆಯುವಂತೆ ಹೊಡೆದಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಸಧ್ಯ ಗಂಭೀರವಾಗಿ ಗಾಯಗೊಂಡ ನಿಂಗಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಸಕ ಲಕ್ಷ್ಮಣ ಸವದಿ ಮನೆ ಹತ್ತಿರದಿಂದಲೇ ಗಂಭೀರವಾಗಿ ಗಾಯಗೊಂಡ ನಿಂಗಪ್ಪ ಕರೆಣ್ಣವರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರಿದಿದೆ.‌


Advertisement

Leave a reply

Your email address will not be published. Required fields are marked *

error: Content is protected !!