Select Page

ಅಥಣಿ ಮಳೆ ಅವಾಂತರ – ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ಅಥಣಿ ಮಳೆ ಅವಾಂತರ – ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಸತತವಾಗಿ  ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ತಾಸೆ ಗಲ್ಲಿಯ ನಿವಾಸಿ ಕಾಶಿನಾಥ ಅಪ್ಪಾಸಾಬ ಸುತಾರ (23) ಮೃತ ದುರ್ದೈವಿ. ಸತತವಾಗಿ ಸುರಿದ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಯುವಕನ ಮೈ ಮೇಲೆ ಕುಸಿತದ ಕಲ್ಲು ಮಣ್ಣು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಅಥಣಿ ಪಿಎಸ್ಐ ಹಾಗೂ ಸಿಪಿಐ ಭೇಟಿ ಪರಿಶೀಲನೆ ಮಾಡುತ್ತಿದ್ದು, ಅಥಣಿ ಶಾಸಕರ ಪರವಾಗಿ ಮುಖಂಡ‌ ಚಿದಾನಂದ ಸವದಿ ಭೇಟಿ ನೀಡಿ ಸಾಂತ್ವಾನ ಹೇಳಿದರು.

ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದ್ದು, ವಯಸ್ಸಿಗೆ ಬಂದಿದ್ದ ಯುವಕನ ಸಾವಿನಿಂದ ಕುಟುಂಬಸ್ಥರ ಆಕ್ರಂದಣ ಮುಗಿಲು ಮುಟ್ಟಿದೆ‌.

Advertisement

Leave a reply

Your email address will not be published. Required fields are marked *

error: Content is protected !!