Select Page

Advertisement

ನಡುರಸ್ತೆಯಲ್ಲೇ ಮನಬಂದಂತೆ ಕೊಚ್ಚಿದ ಕಿರಾತಕ

ನಡುರಸ್ತೆಯಲ್ಲೇ ಮನಬಂದಂತೆ ಕೊಚ್ಚಿದ ಕಿರಾತಕ

ಬೈಲಹೊಂಗಲ: ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಯುವನನೋರ್ವನ ಮೇಲೆ ಮಾರಣಾಂತಿಕ ಹಲ್ಲೇ ನಡೆಸಿ ಕೊಲೆಗೆ ಯತ್ನ ಮಾಡಿದ ಘಟನೆ ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದ ಬಸ್ ನಿಲ್ದಾಣ ಹತ್ತಿರ ಮಂಗಳವಾರ ಸಂಜೆ ನಡೆದಿದೆ.

ಹಲ್ಲೇಗೋಳಗಾದ ಯುವಕನನ್ನು ತಾಲೂಕಿನ ಅರವಳ್ಳಿ ಗ್ರಾಮದ ಮಕ್ತುಂಮಸಾಬ ನಜೀರಸಾಬ ತಟಗಾರ (23) ಎಂದು ಗುರುತಿಸಲಾಗಿದೆ. ಸವಟಗಿ ಗ್ರಾಮದ ಮುತ್ತು ಗಣಾಚಾರಿ (37) ಈತನು ಮಕ್ತುಂಸಾಬ ಕುತ್ತಿಗೆಗೆ,

ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರಿಂದ ತೀವೃವಾಗಿ ಗಾಯಗೊಂಡಿದ್ದನು. ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಯುವಕನನ್ನು ಅಂಬ್ಯಲೆನ್ಸ್ ಮೂಲಕ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ರವಿ ನಾಯ್ಕ, ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ ಸುಮಾ ಗೊರಾಬಾಳ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಆರೋಪಿ ಪರಾರಿಯಾಗಿದ್ದಾನೆ. ಈತನ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ದೊಡವಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!