ತಮ್ಮ ವಿರುದ್ಧ ಆಧಾರ ರಹಿತ ಸುದ್ದಿಗೆ ಬ್ರೆಕ್ ; ಕೋರ್ಟ್ ಮೆಟ್ಟಿಲೇರಿದ ಬೊಮ್ಮಾಯಿ
ಬೆಂಗಳೂರು : ತಮ್ಮ ವಿರುದ್ಧ ಕೇಳಿಬಂದಿರುವ ಆಧಾರ ರಹಿತ ಆರೋಪಗಳ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಹೇಳಲಾಗುತ್ತಿದೆ.
ತಮ್ಮ ವಿರುದ್ಧ ಅನಗತ್ಯ ಹಾಗೂ ಆಧಾರ ರಹಿತವಾದ ಯಾವುದೇ ಸುದ್ದಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ನೀಡುವಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಅಷ್ಟೇ ಅಲ್ಲದೆ ವಕೀಲ ಜಗದೀಶ್ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಮಾನಹಾನಿಕರ ಸುದ್ದಿ ಹಾಗೂ ಹೇಳಿಕೆ ಪ್ರಸಾರ ಮಾಡದಂತೆ ಬೊಮ್ಮಾಯಿ ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಈ ಕುರಿತು ಆಗಸ್ಟ್. 28 ರಂದು ಕೋರ್ಟ್ ಆದೇಶ ಪ್ರಕಟಿಸಲಿದೆ ಎಂದು ವರದಿಯಾಗಿದೆ.


