
ಬೆಳಗಾವಿ : ಶಾಲೆಗಳಿಗೆ ಸೋಮವಾರ ರಜೆ ಘೋಷಣೆ – ಪೂರ್ಣ ಮಾಹಿತಿ ನೋಡಿ

ಬೆಳಗಾವಿ : ನಿರಂತರ ಮಳೆ ಹಾಗೂ ಕೃಷ್ಣಾ ಮತ್ತು ಘಟಪ್ರಭಾ ನದಿ ಪ್ರವಾಹ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್, ಮೂಡಲಗಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜುಲೈ.29 ಹಾಗೂ ಜುಲೈ. 30 ರಜೆ ಘೋಷಣೆ ಮಾಡಲಾಗಿದೆ.
ನಿಪ್ಪಾಣಿ, ಕಾಗವಾಡ ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳು ಹಾಗೂ ಕಾಳಜಿ ಕೇಂದ್ರ ಸ್ಥಾಪಿಸಿರುವ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಇನ್ನುಳಿದಂತೆ ಜಿಲ್ಲೆಯ ಅನೇಕ ತಾಲೂಕಿನಲ್ಲಿ ಮಳೆ ಆರ್ಭಟ ಕಡಿಮೆಯಾಗಿದ್ದು ಶಾಲೆಗಳು ಎಂದಿನಂತೆ ಪ್ರಾರಂಭವಾಗುತ್ತಿವೆ. ಖಾನಾಪುರ ತಾಲೂಕಿನಲ್ಲಿ ಕಳೆದ ಹತ್ತು ದಿನಗಳ ವರೆಗೆ ಶಾಲೆಗಳಿಗೆ ರಜೆ ನೀಡಲಾಗಿತ್ತು.
ಇನ್ನುಳಿದಂತೆ ನಿಪ್ಪಾಣಿಯ ಸಿದ್ನಾಳ, ಹುನ್ನರಗಿ, ಕುನ್ನೂರ, ಮಮದಾಪುರ ಕೆ.ಎಲ್., ಬಾರವಾಡ, ಕಾರದಗಾ ಗ್ರಾಮಗಳು;
ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ, ಹೊಸೂರ ಮತ್ತು ಬಡಕುಂದ್ರಿ ಗ್ರಾಮಗಳು. ಕಾಗವಾಡ ತಾಲ್ಲೂಕಿನ ಜೂಗೂಳ, ಶಾಪುರ, ಮಂಗಾವತಿ, ಕೃಷ್ಣಾ ಕಿತ್ತೂರ, ಕಾತ್ರಾಳ ಮತ್ತು ಬನಜವಾಡ ಗ್ರಾಮಗಳು
ಚಿಕ್ಕೋಡಿ ತಾಲ್ಲೂಕಿನ ಇಂಗಳಿ, ಜನವಾಡ, ಕಲ್ಲೋಳ ಹಾಗೂ ಅಂಕಲಿ ಗ್ರಾಮಗಳ ಶಾಲೆಗಳಿಗೆ ಮಾತ್ರ ಜುಲೈ 29 ಮತ್ತು ಜುಲೈ 30 ರಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.