Select Page

Advertisement

ಅಯೋಧ್ಯೆಯಲ್ಲಿ ನ. 30 ರಂದು ನೂತನ ಹೊಟೆಲ್ ಉದ್ಘಾಟನೆ : ಪ್ರಭಾಕರ ಶೆಟ್ಟಿ

ಅಯೋಧ್ಯೆಯಲ್ಲಿ ನ. 30 ರಂದು ನೂತನ ಹೊಟೆಲ್ ಉದ್ಘಾಟನೆ : ಪ್ರಭಾಕರ ಶೆಟ್ಟಿ

ಬೆಳಗಾವಿ : ಪ್ರಭು ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ನೂತನವಾಗಿ “ರಾಮಾಂಜನೇಯ ದ್ ಎಕ್ಸಿಕ್ಯೂಟಿವ್ ಹೊಟೆಲ್” ಮತ್ತು “ಉಡುಪಿ ಅಯೋಧ್ಯಾ ಫುಡ್ ಪ್ಯಾಲೇಸ್” ಇದೇ ನವೆಂಬರ್. 30 ರಂದು ಉದ್ಘಾಟನೆಯಾಗಲಿದೆ ಎಂದು ಉದ್ಯಮಿ ಪ್ರಭಾಕರ ಶೆಟ್ಟಿ ತಿಳಿಸಿದರು.

ಶನಿವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು, ಹೋಟೆಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಟ್ರಸ್ಟಿ ಹಾಗೂ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಮಂದಿರ ನಿರ್ಮಾಣದ ಉಸ್ತುವಾರಿ ಗೋಪಾಲ್ ನಾಗರಕಟ್ಟೆ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಅಮಿತ್ ಮಿಶ್ರಾ, ಮೌಂಟ್ ಏವರೇಸ್ಟ್ ಏರಿದ ಪ್ರಥಮ ಮಹಿಳೆ ಅರುನಿಮಾ ಸಿನ್ಹಾ, ಬಂಟರ ಸಂಘದ ಅಧ್ಯಕ್ಷ ವಿಠ್ಠಲ ಹೆಗಡೆ, ಗೋಪಾಲ ಶೆಟ್ಟಿ, ವಿಜಯ ಶೆಟ್ಟಿ ಸೇರಿ ಮತ್ತಿತರ ಗಣ್ಯರು ಉಪಸ್ಥಿತಿ ಇರಲಿದ್ದಾರೆ ಎಂದರು.

ಈಗಾಗಲೇ ಬೆಳಗಾವಿ, ಕೊಲ್ಹಾಪುರದಲ್ಲಿ ಹೋಟೆಲ್ ಗಳನ್ನು ಹೊಂದಿರುವ ನಾವು ಪವಿತ್ರ ರಾಮ ಜನ್ಮಭೂಮಿಯಲ್ಲಿ ಹೋಟೆಲ್ ಆರಂಭಿಸಬೇಕು ಎಂದು ಕನಸು ಕಂಡಿದ್ದೇವು. ಅದು ಈಗ ಸಾಕಾರವಾಗುತ್ತಿದ್ದು, ಅಯೋಧ್ಯೆಯಲ್ಲಿ ನಿರ್ಮಿಸಿರುವ ನೂತನ ಹೋಟೆಲ್ ನಲ್ಲಿ ಉತ್ತರಕರ್ನಾಟಕ, ದಕ್ಷಿಣ ಕರ್ನಾಟಕ ಸೇರಿ ಉತ್ತರ ಭಾರತದ ಗುಣಮಟ್ಟದ ಪ್ರಸಿದ್ಧ ಸಸ್ಯಾಹಾರಿ ತಿಂಡಿ-ತಿನಿಸುಗಳನ್ನು ಸವಿಯಬಹುದು. ಡಿಲಕ್ಸ್, ಎಸಿ, ನಾನ್ ಎಸಿ ಸುಸಜ್ಜಿತ ರೂಮ್, ಪಾರ್ಟಿ ಹಾಲ್ ಸೇರಿ ಮತ್ತಿತರ ಸೌಲಭ್ಯಗಳು ಇಲ್ಲಿರಲಿವೆ ಎಂದು ತಿಳಿಸಿದರು.

ಅಯೋಧ್ಯೆಯಲ್ಲಿ ಶ್ರೀರಾಮನ ಬಾಲ ಮೂರ್ತಿ ಲೋಕಾರ್ಪಣೆಗೊಂಡ ಬಳಿಕ ಇಲ್ಲಿನ ಹೋಟೆಲ್, ವಸತಿ ಗೃಹಗಳ ದರಗಳು ಗಗನಕ್ಕೇರಿವೆ. ಆದರೆ, ನಾವು ಆರಂಭಿಸುತ್ತಿರುವ ಹೋಟೆಲ್ ಮತ್ತು ವಸತಿ ಗೃಹದಲ್ಲಿ ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ರಿಯಾಯಿತಿ ದರ ನಿಗದಿಪಡಿಸಲಾಗಿದೆ.

ಅಲ್ಲದೇ ಇಡೀ ಹೋಟೆಲ್ ಕನ್ನಡಮಯ ಆಗಿರಲಿದ್ದು, ಕೆಲಸಕ್ಕೆ ಕನ್ನಡಿಗರಿಗೆ ಆಧ್ಯತೆ ನೀಡಲಾಗುವುದು. ಒಟ್ಟಾರೆ ಕರ್ನಾಟಕದಿಂದ ಬರುವ ಭಕ್ತರಿಗೆ ವಿಶೇಷ ಆದರಾತಿಥ್ಯ ನೀಡಲಾಗುತ್ತದೆ, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಲಾಗುವುದು ಎಂದು ಪ್ರಭಾಕರ ಶೆಟ್ಟಿ ತಿಳಿಸಿದರು.
ಈ ವೇಳೆ ಜಯರಾಮ ಶೆಟ್ಟಿ, ಸುರೇಶ ಶೆಟ್ಟಿ ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!