
ಬೆಳಗಾವಿಯಲ್ಲಿ ಗುಂಡಿನ ಸದ್ದು ; ಯುವಕನ ಕಾಲಿಗೆ ಗುಂಡೇಟು

ಬೆಳಗಾವಿ : ಬೆಳಗಾವಿಯಲ್ಲಿ ಮತ್ತೆ ದುರುಳರು ಅಟ್ಟಹಾಸ ಮೆರೆದಿದ್ದು ಯುವಕ ಮೇಲೆ ಎರಡು ಸುತ್ತಿನ ಗುಂಡು ಹಾರಿಸಿ
ದುಷ್ಕರ್ಮಿಗಳು ಪರಾರಿಯಾದ ಘಟನೆ ನಡೆದಿದೆ.
ಕೆಎಂಎಫ್ ಡೈರಿ ಬಳಿಯ ಟಿಳಕವಾಡಿ ನಿವಾಸಿ ಪ್ರಣೀತ್ ಕುಮಾರ್ (31) ಎಂಬಾತನ ಮೇಲೆ ಗುಂಡು ಹಾರಿಸಲಾಗಿದ್ದು ಕಾಲಿಗೆ ಗಂಭೀರ ಗಾಯವಾಗಿದೆ.
ಬೆಳಗಾವಿಯ ಮಹಾಂತೇಶ ನಗರ ಬಳಿಯ ಕೆಎಂಎಫ್ ಡೈರಿಯ ಬಳಿ ಪ್ರಣೀತ್ ಕುಮಾರ್ ಮೇಲೆ ಗುಂಡಿನ ದಾಳಿ ನಡೆದಿದೆ. ವೈಯಕ್ತಿಕ ದ್ವೇಷ ಹಿನ್ನೆಲೆ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.