
ಬೆಳಗಾವಿ – ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ

ಬೆಳಗಾವಿ : ಡ್ಯೂಟಿ ಬದಲಿಸಿದ್ದಕ್ಕೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ನಾಟಕವಾಡಿದ ವಿಚಿತ್ರ ಘಟನೆ ಬೆಳಗಾವಿ ನಗರದ ಉದ್ಯಮಬಾಗ ಠಾಣೆಯಲ್ಲಿ ಘಟನೆ ನಡೆದಿದೆ.
ಪೇದೆ ಮುದಕಪ್ಪ ಉದಗಟ್ಟಿ ಎರಡು ದಿನ ರಜೆ ಮುಗಿಸಿ ಕೆಲಸಕ್ಕೆ ಬಂದಿದ್ದ. ಈ ಸಂದರ್ಭದಲ್ಲಿ ಟ್ಯೂಟಿ ಬದಲಿಸಿ
ಕರ್ತವ್ಯ ನಿಯೋಜಿಸಿದ ಜಾಗಕ್ಕೆ ಹೋಗಬೇಕೆಂದು ಸೂಚನೆ ನೀಡಿದ್ದರು. ಆದರೆ ಇದಕೊಪ್ಪದ ಮುದಕಪ್ಪ, ವಿಷ ಸೇವಿಸುತ್ತೇನೆ ಎಂದು ಹೇಳಿದ್ದಲ್ಲದೆ ದಾಳಿಯಲ್ಲಿ ಬಿದ್ದು ಹೊರಳಾಡಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಯಲಾಗಿದ್ದು ಆರೋಗ್ಯ ತಪಾಸಣೆ ಮಾಡಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು, ಮುದಕಪ್ಪ ವಿಷ ಸೇವಿಸಿಲ್ಲ ಎಂದು ದೃಢಪಡಿಸಿದ್ದಾರೆ. ಬಳಿಕ ಮೇಲಾಧಿಕಾರಿಗಳು ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ.
ಪೇದೆಯ ಹುಚ್ಚಾಟ ಕಂಡು ಠಾಣೆಯ ಪಿಐ ಡಿ.ಕೆ ಪಾಟೀಲ ಬಿ.ಪಿ ಕಡಿಮೆಯಾಗಿ ಕುಸಿದು ಬಿದ್ದಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.