
ಬೆಳಗಾವಿ : ಭೀಕರ ರಸ್ತೆ ಅಪಘಾತ, ತಪ್ಪಿದ ಅನಾಹುತ

ಬೆಳಗಾವಿ : ನರೇಗಾ ಕಾರ್ಮಿಕರನ್ನು ತುಂಬಿಕೊಂಡು ಕೆಲಸಕ್ಕೆ ಹೊರಟಿದ್ದ ಗೂಡ್ಸ್ ವಾಹನ ಪಲ್ಡಿಯಾದ ಪರಿಣಾಮ 25 ಜನರು ಗಾಯಗೊಂಡ ಘಟನೆ ಹುಕ್ಕೇರಿಯಲ್ಲಿ ನಡೆದಿದೆ.
ಗುರುವಾರ ಹುಕ್ಕೇರಿ ತಾಲೂಕಿನ ಹೊಸುರ ಗ್ರಾಮದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು ಯಮಕನಮರಡಿ ಗ್ರಾಮದಿಂದ ಹಿಡಕಲ್ ಡ್ಯಾಂ ಗೆ ಕೂಲಿ ಕೆಲಸಕ್ಕೆ ಹೊರಟಿದ್ದ ವಾಹನ ಪಲ್ಟಿಯಾಗಿದೆ.
ಬೈಕ್ ಅಡ್ಡಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಜನರಿದ್ದ ಗೂಡ್ಸ್ ವಾಹನ ಪಲ್ಟಿಯಾಗಿದೆ. 30 ಕ್ಕೂ ಅಧಿಕ ಜನ ವಾಹನದಲ್ಲಿ ಸಂಚರಿಸುತ್ತಿದ್ದರು. ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.