ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ ; ಐದನೇ ಆರೋಪಿ ಬಂಧನ
ಬೆಳಗಾವಿ : ಮರಾಠಿ ಮಾತನಾಡಲು ಬರುವುದಿಲ್ಲ ಕನ್ನಡ ಮಾತಾಡಿ ಎಂದು ಹೇಳಿದ್ದ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ.
ಬಾಳೇಕುಂದ್ರಿ ಬಳಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ನಿನ್ನೆ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇವತ್ತು ಅಪ್ರಾಪ್ತ ಸೇರಿ ಇಬ್ಬರನ್ನು ಮಾರಿಹಾಳ ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತ ಸೇರಿ ಮೋಹನ್ ಹಂಚಿನಮನಿ ( 25 ) ಬಂಧಿಸಲಾಗಿದೆ. ನಿನ್ನೆಯಷ್ಟೇ ತುಮರಿ ದತ್ತು ಚಂದಗಡಕರ (33), ರಾಹುಲ್ ರಾಜು ನಾಯ್ಡು (28), ಬಾಳು ಸುರೇಶ್ ಗೊಂಜೇಕರ (28) ಬಂಧಿತ ಆರೋಪಿಗಳನ್ನು ಹಿಂಡಲಗಾ ಜೈಲಿಗೆ ರವಾನಿಸಲಾಗಿತ್ತು.


