
ಬೆಳಗಾವಿ : ದೇವಸ್ಥಾನದ ಮೇಲೆ ಕಲ್ಲೆಸೆದ ಮುಸ್ಲಿಂ ಯುವಕ ; ಸ್ಥಳದಲ್ಲಿ ಉದ್ವಿಗ್ನ ವಾತಾವರಣ

ಬೆಳಗಾವಿ : ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ದೇವಸ್ಥಾನದ ಮೇಲೆ ಕಲ್ಲು ತೂರಿದ ಘಟನೆ ಬೆಳಗಾವಿ ನಗರದ ಪಾಂಗುಳ ಗಲ್ಲಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಪಾಂಗುಳ ಗಲ್ಲಿಯಲ್ಲಿರುವ ಅಶ್ವತ್ಥಾಮ ದೇವಸ್ಥಾನದ ಮೇಲೆ ಕಲ್ಲು ತೂರಿದ್ದಾನೆ. ಕಲ್ಲು ತೂರಿದ ವ್ಯಕ್ತಿಯನ್ನು ಉಜ್ವಲ್ ನಗರದ ನಿವಾಸಿ ಯಾಶೀರ್ ಎಂದು ಗುರುತಿಸಲಾಗಿದೆ.
ದೇವಸ್ಥಾನದ ಮೇಲೆ ಕಲ್ಲು ತೂರುತ್ತಿದ್ದಂತೆ ಯಾಶೀರ್ ನನ್ನು ಸ್ಥಳೀಯರು ಹಿಡಿದು ಕಂಬಕ್ಕೆ ಕಟ್ಟಿಹಾಕಿದ್ದಾರೆ. ಈ ವೇಳೆ ಸ್ಥಳೀಯರು ಆತನನ್ನು ಕಂಬಕ್ಕೆ ಕಟ್ಟಿ ಹಾಕಿ ಪ್ರಶ್ನೆ ಮಾಡಿದಾಗ ನನ್ನದು ತಪ್ಪಾಗಿದೆ ಕ್ಷಮಿಸಿ ಬಿಡಿ ಎಂದು ಕೇಳಿಕೊಂಡಿದ್ದಾನೆ.
ಸ್ಥಳೀಯರು ಮತ್ತೆ ಪ್ರಶ್ನೆ ಮಾಡಿದಾಗ ಮೊನ್ನೆ ಬುರ್ಕಾ ಹಾಕಿಕೊಂಡು ಡಾನ್ಸ್ ಮಾಡಿದ್ದರು ಎಂದು ಹೇಳಿದ್ದಾನೆ. ಭಾಷಾ ವೈಷಮ್ಯದಿಂದ ಆಗಾಗ ಸುದ್ದಿಯಲ್ಲಿರೋ ಬೆಳಗಾವಿ ಇಂತಹ ಕಿಡಿಗೇಡಿಗಳು ಮಾಡುವ ಇಂತಹ ಕೃತ್ಯಗಳಿಂದ ಕೋಮು ವೈಷಮ್ಯದತ್ತ ವಾಲುತ್ತಿದೆಯಾ ಎನ್ನುವ ಪ್ರಶ್ನೆಗಳು ಉದ್ಭವವಾಗುತ್ತಿವೆ.
ಯಾರೋ ಒಬ್ಬ ಕಿಡಿಗೇಡಿ ಬುರ್ಕಾಹಾಕಿಕೊಂಡು ಡಾನ್ಸ್ ಮಾಡಿದರೆ ಮತ್ತೊಬ್ಬ ಕಿಡಿಗೇಡಿ ದೇವಸ್ಥಾನದ ಮೇಲೆ ಕಲ್ಲು ತೂರಿ ಎರಡೂ ಸಮಾಜಗಳ ನಡುವೆ ಬೆಂಕಿ ಇಡುವ ಕೆಲಸ ಮಾಡುತ್ತಿದ್ದಾರೆ.
ಇಂತಹ ಕಿಡಿಗೇಡಗಳ ಕೃತ್ಯಗಳನ್ನು ಪ್ರಜ್ಞಾವಂತ ಸಮಾಜ ಸೂಕ್ಷ್ಮವಾಗಿ ಗಮನಿಸಬೇಕಿದೆ. ಅಲ್ಲದೆ ಪೊಲೀಸರೂ ಸಹ ಇಂತವರಿಗೆ ಬಿಸಿ ಮುಟ್ಟಿಸಿ ಕಾನೂನಿನ ಕುಣಿಕೆ ಹಾಕಬೇಕಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.