ಖಾನಾಪುರ ತಹಶಿಲ್ದಾರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಬೆಳಗಾವಿ : ಖಾನಾಪುರ ತಹಶಿಲ್ದಾರ ಕಚೇರಿ ಮೇಲೆ ಪೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಸೋಮವಾರ ಮಧ್ಯಾಹ್ನ ಬೆಳಗಾವಿ ಲೋಕಾಯುಕ್ತ ಡಿಎಸ್ಪಿ ಬಿ.ಎಸ್ ಪಾಟೀಲ ನೇತೃತ್ವದಲ್ಲಿ ದಾಳಿ ನಡೆದಿದ್ದು ವಿವಿಧ ಕಡತ ಪರಿಶೀಲನೆ ಮಾಡಲಾಗುತ್ತಿದೆ.
ಈ ಹಿಂದೆ ಭ್ರಷ್ಟಾಚಾರ ಆರೋಪದ ಮೇಲೆ ತಹಶಿಲ್ದಾರ ವರ್ಗಾವಣೆ ಮಾಡಲಾಗಿತ್ತು. ಸಧ್ಯ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಸಾಕಷ್ಟು ಅನುಮಾನ ಹುಟ್ಟುಹಾಕಿದೆ.


