Select Page

ಸೋಫಿಯಾ ಖುರೇಷಿ ಪತಿ ಮನೆ ಮೇಲೆ ದಾಳಿ : ಸುಳ್ಳು ಸುದ್ದಿ ಹಬ್ಬಿಸಿದ ಕಿರಾತಕ

ಸೋಫಿಯಾ ಖುರೇಷಿ ಪತಿ ಮನೆ ಮೇಲೆ ದಾಳಿ : ಸುಳ್ಳು ಸುದ್ದಿ ಹಬ್ಬಿಸಿದ ಕಿರಾತಕ

ಬೆಳಗಾವಿ : ಪಹಲ್ಗಾಮ ದಾಳಿ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಮಾಹಿತಿ ನೀಡುತ್ತಿದ್ದ ಸೇನಾಧಿಕಾರಿ ಸೋಫಿಯಾ ಖುರೇಷಿ ಮನೆ ಮೇಲೆ, ಆರ್ ಎಸ್ ಎಸ್ ಸಂಘಟನೆ ಸದಸ್ಯರು ದಾಳಿ ಮಾಡಿದ್ದಾರೆ ಎಂದು ಕಿಡಿಗೇಡಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ವೈರಲ್‌ ಮಾಡಿದ್ದಾನೆ.

ಅನಿಸ್ ಉದ್ದೀನ್ ಎಂಬಾತ ಈ ಕುರಿತು ಎಕ್ಸ್ ನಲ್ಲಿ ಟ್ವಿಟ್ ಮಾಡಿದ್ದು, ಸೇನಾಧಿಕಾರಿ ಸೋಫಿಯಾ ಖುರೇಷಿ ಅವರ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿರು ಪತಿ‌ ಮನೆ ಮೇಲೆ ದಾಳಿ ಮಾಡಲಾಗಿದೆ ಎಂದು ಹಳೆ ಪೋಟೋ ಒಂದನ್ನು ಸೇರಿಸಿ ಸುಳ್ಳು ಸುದ್ದಿ ಹಬ್ಬಿಸಿದ್ದಾನೆ. ಅಷ್ಟೇ ಅಲ್ಲದೆ ದಾಳಿಕೋರರಿಂದ ತಪ್ಪಿಸಿಕೊಳ್ಳಲು ಖುರೇಷಿ ಕುಟುಂಬವನ್ನು ದೆಹಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಸಾಮಾಜಿಕ‌ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ.‌

ಈ ಕುರಿತು ಮಾಹಿತಿ ನೀಡಿರುವ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ಅವರು, ಈ ರೀತಿಯಲ್ಲಿ ಯಾವುದೇ ಘಟನೆ ನಡೆದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದ್ದು, ಸಾರ್ವಜನಿಕರು ಕಿವಿಗೊಡಬಾರದು ಎಂದು ಸ್ಪಷ್ಟಪಡಿಸಿದ್ದಾರೆ‌.

ಬೆಳಗಾವಿ ಸೊಸೆ ಸೋಫಿಯಾ ಖುರೇಷಿ : ಆಪರೇಷನ್ ಸಿಂದೂರ ಮಹತ್ವದ ದಾಳಿ ಕುರಿತು ಪತ್ರಿಕಾ ವಿವರಣೆ ನೀಡಿದ್ದ ಮಹಿಳಾ ಅಧಿಕಾರಿಯಲ್ಲಿ ಒಬ್ಬರಾದ ಕರ್ನಲ್ ಸೋಫಿಯಾ ಖುರೇಷಿ ಪತಿ ಕರ್ನಲ್ ತಾಜುದ್ದೀನ್ ಬಾಗೇವಾಡಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದವರು. ಇದೇ ವಿಚಾರವಾಗಿ ಮುಸ್ಲಿಂ ಯುವಕ ಅವರ ಮನೆ ಮೇಲೆ ದಾಳಿಯಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ಮಾಡಿದ್ದಾನೆ.

Advertisement

Leave a reply

Your email address will not be published. Required fields are marked *

error: Content is protected !!