Select Page

Advertisement

ಬೆಳಗಾವಿಯಲ್ಲಿ ಸಿಡಿದೆದ್ದ ಅನ್ನದಾತರು ; ಸರಕಾರದ ವಿರುದ್ಧ ಆಕ್ರೋಶ

ಬೆಳಗಾವಿಯಲ್ಲಿ ಸಿಡಿದೆದ್ದ ಅನ್ನದಾತರು ; ಸರಕಾರದ ವಿರುದ್ಧ ಆಕ್ರೋಶ

ಬೆಳಗಾವಿ : ವೈಜ್ಞಾನಿಕ ಬೆಲೆ ನೀಡದ ಸಕ್ಕರೆ ಕಾರ್ಖಾನೆಗಳ ವಿರುದ್ಧ ರೈತರು ಬೀದಿಗಿಳಿಯುವ ಮೂಲಕ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಲೆ ನೀಡುವಂತೆ ಆಗ್ರಹಿಸಿ ನಿಪ್ಪಾಣಿ – ಮುಧೋಳ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಗುರುವಾರ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ನ ನಿಪ್ಪಾಣಿ – ಮುಧೋಳ ರಾಜ್ಯ ಹೆದ್ದಾರಿ ತಡೆದ ಸಾವಿರಾರು ರೈತರು ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿ ಅಹೋರಾತ್ರಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ‌.

ರೈತ ಸಂಘಟನೆ ಜೊತೆ ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಸಾವಿರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಅಷ್ಟೇ ಅಲ್ಲದೆ ವಿವಿಧ ಪಕ್ಷದ ಮುಖಂಡರೂ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!