ಕಬ್ಬು ಬೆಳೆಗಾರರ ಪ್ರತಿಭಟನೆ ; ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆಗೆ ಯತ್ನ..!
ಬೆಳಗಾವಿ : ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು ರೈತ ಲಕ್ಕಪ್ಪ ಗುಣದಾಳ (35) ಕೀಟನಾಶಕ ಸೇವಿಸಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಬ್ಬಿಗೆ 3,500 ಬೆಲೆ ನೀಡುವಂತೆ ಆಗ್ರಹಿಸಿ ಕಳೆದ ಒಂದು ವಾರದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಗುರ್ಲಾಪುರ ಕ್ರಾಸ್ ನ ಮುಧೋಳ – ನಿಪ್ಪಾಣಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.


