Select Page

Advertisement

ಹುಬ್ಬಳ್ಳಿ ವಿದ್ಯಾರ್ಥಿನಿ ಅಂಜಲಿ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ ವಿದ್ಯಾರ್ಥಿನಿ ಅಂಜಲಿ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ಬೆಳಗಾವಿ : ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ‌ಶಿಕ್ಷೆ ನೀಡಬೇಕೆಂದು ಆಗ್ರಹಿ ಶುಕ್ರವಾರ ಬೆಳಗಾವಿ ಜಿಲ್ಲಾ ಕೋಳಿ ಬೆಸ್ತ ಸಮಾಜದ ವತಿಯಿಂದ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.

ಅಂಜಲಿ ಹಂತಕ ಕೊಲೆ ಬೆದರಿಕೆ ಹಾಕಿದ್ದು, ಈ ಬಗ್ಗೆ ಪೊಲೀಸರಿಗೆ ಮೌಖಿಕ ದೂರು ನೀಡಿದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ್ದರಿಂದ ಅಂಜಲಿ ಹತ್ಯೆ ನಡೆದಿದೆ. ನೇಹಾ ಹಿರೇಮಠ ಹತ್ಯೆ ಸಂದರ್ಭದಲ್ಲೇ ಪೊಲೀಸರು ಕಠಿನ ಕ್ರಮ ಕೈಗೊಂಡಿ ದ್ದರೆ ಇಂತಹ ಘಟನೆಗಳು ಮರು ಕಳಿಸುತ್ತಿರಲಿಲ್ಲ ಎಂದು ಆರೋಪಿಸಿದರು.

ನೇಹಾ ಹಾಗೂ ಅಂಜಲಿ ಹಂತಕರನ್ನು ಗಲ್ಲಿಗೇರಿಸಿ, ಎನ್‌ಕೌಂಟರ್‌ ಮಾಡಿ. ಸಾಧ್ಯವಾಗದಿ ದ್ದರೆ ನಮ್ಮ ಕೈಗೆ ಅವರನ್ನು ಕೊಟ್ಟು ಬಿಡಿ ನಾವು ನೋಡಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ರಾಜ್ಯ ಸಭಾ ಸದಸ್ಯ ಸಾಬಣ್ಣ ತಳವಾರ ಮಾತನಾಡಿ. ಅಂಜಲಿ ಅಂಬಿಗೇರ್ ಕೊಲೆ ಖಂಡಿಸಿ ಬೆಳಗಾವಿ ನಗರದಲ್ಲಿ ಕೋಳಿ ಬೆಸ್ತ ಸಮುದಾಯ ಪ್ರತಿಭಟನೆ
ಮಾಡಲಾಗುತ್ತಿದೆ. ಇಡೀ ಜಿಲ್ಲೆಯ ಸಮುದಾಯ ಬಾವಂಧವರು ಪ್ರತಿಭಟನೆ ಭಾಗಿಯಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಇದು ಎರಡನೇ ಘಟನೆ ಆಗಿದೆ. ಈಗಲೂ ಕೂಡಾ ವಿದ್ಯಾರ್ಥಿನಿ ಮೇಲೆ ಹಲ್ಲೆ‌ಮಾಡಿ ಕೊಲೆ ಮಾಡಿದೆ. ಯಾವುದೋ ಕಾರಣ ಇಟ್ಟುಕೊಂಡ ಕೊಲೆ ಮಾಡಿದ್ದಾನೆ. ನೇಹಾ ಕೊಲೆ ಮಾಸುವ ಮುನ್ನವೇ ಈಗ ಮತ್ತೊಂದು ಕೊಲೆ ಆಗಿದೆ.ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ.

ಅಂಜಲಿ ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಮೃತ ಅಂಜಲಿ ಕುಟುಂಬದ ಸದಸ್ಯರಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಮಾಜಿ ಉಪ ಮಹಾಪೌರ ಮಧುಶ್ರೀ ಪೂಜಾರಿ ಮಾತನಾಡಿ ಅಂಜಲಿ ಅಂಬಿಗೇರ ಕೊಲೆ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದೇವೆ.ನೇಹಾ ಕೊಲೆ ಇನ್ನೂ ಮರೆತ್ತಿಲ್ಲ ಈಗಾ ಮತ್ತೊಂದು ಕೊಲೆಯಾಗಿದೆ. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಇದರ ಬಗ್ಗೆ ಗಮನ ಸರಿಸಬೇಕು. ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಕೋಳಿ ಬೆಸ್ತ ಸಮಾಜದ ಜಿಲ್ಲಾಧ್ಯಕ್ಷ ದಿಲೀಪ ಕುರದಂವಾಡೆ, ಧರೆಪ್ಪ ಪೂಜಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!