Select Page

Advertisement

ಕೃಷ್ಣಾ‌‌ ನದಿಯಲ್ಲಿ ಪ್ರವಾಹ ಭೀತಿ ; ಯಡೂರ- ಕಲ್ಲೋಳ ಬ್ಯಾರೇಜ್ ಜಲಾವೃತ

ಕೃಷ್ಣಾ‌‌ ನದಿಯಲ್ಲಿ ಪ್ರವಾಹ ಭೀತಿ ; ಯಡೂರ- ಕಲ್ಲೋಳ ಬ್ಯಾರೇಜ್ ಜಲಾವೃತ

ಚಿಕ್ಕೋಡಿ : ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ‌ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ, ವೇದಗಂಗಾ, ದೂದಗಂಗಾ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಪರಿಣಾಮ ತಾಲೂಕಿನ 3 ಕೆಳಹಂತದ ಸೇತುವೆಗಳು ಜಲಾವೃತಗೊಂಡಿವೆ.

ಮಹಾರಾಷ್ಟ್ರದ ಸಾಂಗಲಿ, ಕೊಲ್ಹಾಪೂರ ಸೇರಿದಂತೆ ವಿವಿಧ ಭಾಗಗಳಲ್ಲಿ ಹಾಗೂ ಚಿಕ್ಕೋಡಿ,ನಿಪ್ಪಾಣಿ ತಾಲೂಕಿನಲ್ಲಿ ಕಳೆದ 8 ದಿನಗಳಿಂದ ನಿರಂತರವಾಗಿ ಸುರುಯುತ್ತಿರುವ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಏರಿಕೆಯಾಗುತ್ತಿದೆ.

ಪರಿಣಾಮ ಇವತ್ತು ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರ-ಕಲ್ಲೋಳ ಬ್ಯಾರೇಜ್, ಮಾಂಜರಿ-ಸೌಂದತ್ತಿ ಹಾಗೂ ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮಲಿಕವಾಡ-ದತ್ತವಾಡ ಬ್ರಿಜ್ ಮುಳಗಡೆಯಾಗಿದೆ.

ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ಒಟ್ಟು 7 ಸೇತುವೆಗಳು ‌ಜಲಾವೃತಗೊಂಡಿವೆ. ನದಿತೀರದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ.ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜನಿಂದ 22,250 ಕ್ಯೂಸೆಕ್,ದೂಧಗಂಗಾ ನದಿಯಿಂದ 10,910 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಲ್ಲೋಳ ಬ್ಯಾರೇಜ್ ನಿಂದ ಒಟ್ಟು 33,160 ಕ್ಯೂಸೆಕನಷ್ಟು ನೀರು ಬರುತ್ತಿದೆ. ನದಿತೀರದ ಜನರಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!