ಅಥಣಿ : ಟಿಪ್ಪರ್ ಚಾಲಕನ ನಿರ್ಲಕ್ಷ್ಯ ; ಬೈಕ್ ಸವಾರ ಸ್ಥಳದಲ್ಲೇ ಸಾವು
ಅಥಣಿ : ಟಿಪ್ಪರ್ ಚಾಲಕನ ನಿರ್ಲಕ್ಷ್ಯಕ್ಕೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವಣಪ್ಪಿರುವ ಘಟನೆ ನಡೆದಿದೆ.
ಅಥಣಿ ತಾಲೂಕಿನ ಯಲಹಡಲಗಿಯಲ್ಲಿ ರಾಮತೀರ್ಥ ಕಡೆಗೆ ಬೈಕ್ ಸವಾರ ಹೊರಟಿದ್ದ ಸಂದರ್ಭದಲ್ಲಿ ಅಜಾಗರೂಕತೆಯಿಂದ ಟಿಪ್ಪರ್ ಚಾಲನೆ ಮಾಡಿದ್ದು ಬೈಕ್ ಗೆ ಡಿಕ್ಕಿ ಹೊಡೆದಿದೆ.
ರಾಮಾತೀರ್ಥ ಗ್ರಾಮದ ಬೈಕ್ ಸವಾರ ವಿಠ್ಠಲ ಖಂಡೇಕರ್ (38) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


