ಅಥಣಿ : ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಮಾಡಿದ ಸಿಎಂ ಸಿದ್ದರಾಮಯ್ಯ
ಅಥಣಿ : ಪಟ್ಟಣದಲ್ಲಿ ನಿರ್ಮಾಣವಾಗಿದ್ದ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.
ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಬಸವೇಶ್ವರ ಪುತ್ಥಳಿ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಶಾಸಕ ಲಕ್ಷ್ಮಣ ಸವದಿ ಮತ್ತಿತರರು ಉಪಸ್ಥಿತರಿದ್ದರು.


